‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವು ಕಳೆದ ವರ್ಷ ವಿಜಯದಶಮಿಯ ದಿನದಂದು ಅಧಿಕೃತವಾಗಿ ಘೋಷಣೆಯಾಗಿತ್ತು. ಈಗ ಈ ವರ್ಷ ಅದೇ ದಿನದಂದು ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದೆ.
ರಮ್ಯಾ ಇದೇ ಮೊದಲ ಬಾರಿಗೆ ತಮ್ಮ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ನಿಂದ ನಿರ್ಮಿಸಿರುವ, ರಾಜ್ ಬಿ ಶೆಟ್ಟಿ ಅಭಿನಯಿಸಿ-ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವು ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಸಿನಿಮಾ ಒಂದು ಪ್ರೇಮ ಕಥೆಯಾಗಿದ್ದು, ರಾಜ್ ಬಿ ಶೆಟ್ಟಿ ಮತ್ತು ಸಿರಿ ರವಿಕುಮಾರ್ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ರೇಖಾ ಕೂಡ್ಲಿಗಿ, ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ಜೆಪಿ ತುಮ್ಮಿನಾಡು, ಸ್ನೇಹಾ ಶರ್ಮ, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ಪ್ರವೀಣ್ ಶ್ರೀಯಾನ್ ಅವರ ಛಾಯಾಗ್ರಹಣ ಮತ್ತು ಮಿಥುನ್ ಮುಕುಂದನ್ ಅವರ ಸಂಗೀತವಿದೆ.
ಚಿತ್ರದಲ್ಲಿ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಮಿಧುನ್ ಮುಕುಂದನ್ ಸಂಗೀತ ಸಂಯೋಜಿಸಿದ್ದರೆ, ರಮ್ಯಾ ಅವರು ತಮ್ಮ ಮೊದಲ ನಿರ್ಮಾಣ ಬ್ಯಾನರ್ ಆಪಲ್ ಬಾಕ್ಸ್ ಸ್ಟುಡಿಯೋಸ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.