ಬೆಂಗಳೂರು: ಇಂಡೋನೇಷ್ಯಾ ಮತ್ತು ಕಜಕಿಸ್ತಾನ್ನಿಂದ ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿದ್ದ 19 ವಿದೇಶಿಯರು ಬೆಂಗಳೂರು ಸೇರಿ ವಿವಿಧೆಡೆ ಧಾರ್ವಿುಕ ಪ್ರಚಾರದಲ್ಲಿ ತೊಡಗಿದ್ದರೆಂಬ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ 19 ಜನರ ವಿರುದ್ಧ ಜೆ.ಜೆ. ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇಂಡೋನೇಷ್ಯಾದ 10 ಮತ್ತು ಕಜಕಿಸ್ತಾನ್ ದೇಶದ 9 ಪ್ರಜೆಗಳ ವಿರುದ್ಧ ದೂರು ದಾಖಲಾಗಿದೆ. ಎಲ್ಲರನ್ನೂ ಹೋಂ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಮಾ.9ರಂದು ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿದ್ದರು. ದೆಹಲಿಯಲ್ಲಿ ತಬ್ಲಿಘಿ ಧಾರ್ವಿುಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಳಿಕ ಮಾ. 16ರಂದು ಬೆಂಗಳೂರಿನ ಪಾದರಾಯನಪುರ 1ನೇ ಕ್ರಾಸ್ನಲ್ಲಿರುವ ಸುಬಾನಿಯ ಮಸೀದಿಗೆ ಬಂದಿದ್ದರು. ಇಲ್ಲಿಯೂ ಕೂಡ ಧರ್ಮ ಪ್ರಚಾರ ನಡೆಸಿದ್ದಾರೆ. ಕರೊನಾ ಭೀತಿ ಹಿನ್ನೆಲೆಯಲ್ಲಿ ತಬ್ಲಿಘಿ ಧಾರ್ವಿುಕ ಪ್ರಚಾರದಲ್ಲಿ ಪಾಲ್ಗೊಂಡಿದ್ದವರ ಪತ್ತೆಗೆ ತನಿಖೆ ಕೈಗೊಳ್ಳಲಾಗಿತ್ತು.
ಕರೊನಾ ನೆಗೆಟಿವ್: ಸುಬಾನಿಯ ಮಸೀದಿಯಲ್ಲಿ ವಿದೇಶಿಯರು ಧರ್ಮ ಪ್ರಚಾರ ಮಾಡುತ್ತಿರುವ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಬಳಿಕ ಮಸೀದಿಗೆ ಹೋಗಿ ಅವರೆಲ್ಲರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸೋಂಕು ಶಂಕೆ ಮೇರೆಗೆ ಇಂದಿರಾನಗರದ ಸಿ.ವಿ.ರಾಮನ್ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದ್ದಾರೆ. 19 ಮಂದಿಯಲ್ಲೂ ಕರೊನಾ ನೆಗೆಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಎಲ್ಲರನ್ನೂ ಬೆಂಗಳೂರಿನ ಸಾರಾಯಿಪಾಳ್ಯದಲ್ಲಿರುವ ಹಜ್ಭವನದಲ್ಲಿ ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಚೀನಾ ಮೂಲದ ಕರೊನಾಕ್ಕೆ ‘ಸಂಜೀವಿನಿ’ ಆಯ್ತೇ ಭಾರತದ ಹೈಡ್ರೋಕ್ಸಿಕ್ಲೋರೋಕ್ವಿನ್ ?!
ಬಿಇಎಂಎಲ್ ಲೇಔಟ್ನಲ್ಲಿ ಗೆಳತಿಯ ಹತ್ಯೆಗೆ ಯತ್ನಿಸಿದವ ಅರೆಸ್ಟ್: ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೆ ಯತ್ನಿಸಿದ್ದ !