ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಕೆ.ಆರ್. ಪುರಂ ತಹಸೀಲ್ದಾರ್ ಅಜಿತ್ ರೈ, ರಾಜ್ಯದ ಮೊದಲ ಫಾರ್ಮುಲಾ 1 ಟ್ರ್ಯಾಕ್ ನಿರ್ಮಿಸಲು ಯೋಜನೆ ರೂಪಿಸಿದ್ದರು ಎಂಬ ಸ್ಫೋಟಕ ಸಂಗತಿ ಬಯಲಾಗಿದೆ.
ಕಾರ್ ರೇಸ್ ಫಾರ್ಮುಲಾ ಟ್ರ್ಯಾಕ್ ನಿರ್ಮಾಣ ಮಾಡಲು ಅಜಿತ್ ರೈ ಸಾಕಷ್ಟು ಭೂಮಿ ಖರೀದಿ ಮಾಡಿದ್ದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರ ಇರುವ ದೊಡ್ಡಬಳ್ಳಾಪುರ ಬಳಿ 150 ಎಕರೆ ಭೂಮಿಯಲ್ಲಿ ಫಾರ್ಮುಲ ಟ್ರ್ಯಾಕ್ ನಿರ್ಮಾಣ ಮಾಡಲು ರೈ ಪೂರ್ವ ಸಿದ್ದತೆಯಲ್ಲಿದ್ದರು.
ಉತ್ತರ ಪ್ರದೇಶ ನೋಯ್ಡಾದಲ್ಲಿರುವ ಬುದ್ಧ ಇಂಟರನ್ಯಾಷನಲ್ ಸರ್ಕಿಟ್ ಫಾರ್ಮುಲಾ ಕಾರ್ ರೇಸ್ಗೆ ರೈ ಭೇಟಿ ಕೊಟ್ಟಿದ್ದರು. ರೈ ಅವರು ಕಾರುಗಳು ಬಗ್ಗೆ ಕ್ರೇಜ್ ಹೊಂದಿದ್ದರು. ದೇಶ ವಿದೇಶಗಳಲ್ಲಿ ನಡೆಯುತ್ತಿದ್ದ ಫಾರ್ಮುಲಾ ರೇಸ್ಗಳಿಗೆ ಭೇಟಿ ನೀಡುತ್ತಿದ್ದರು. ಇದ್ದರಿಂತ ಪ್ರೇರಿತಗೊಂಡು ಸ್ವಂತ ಫಾರ್ಮುಲಾ ರೇಸ್ ಟ್ರ್ಯಾಕ್ ಆರಂಭಿಸಲು ತಯಾರಿ ನಡೆಸುತ್ತಿದ್ದರು.
ಇದನ್ನೂ ಓದಿ: ವಾಹನ ನೋಂದಣಿ ದಂಧೆಗೆ ತನಿಖೆ ಬಿಸಿ, ಹೊಸಕೋಟೆ ಯಾರ್ಡ್ಗೆ ಖಾಕಿ ಪಡೆ ಲಗ್ಗೆ
ಅಜಿತ್ ರೈ 11 ಐಷಾರಾಮಿ ಕಾರು ಹೊಂದಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ರೇಸ್ ಟ್ರ್ಯಾಕ್ ನಿರ್ಮಾಣ ಮಾಡಿದ್ರೆ ಹೆಚ್ಚಿನ ಸಂಖ್ಯೆಯಲ್ಲಿ ಪೇಕ್ಷಕರು ಕೊಡ ಪಾಲ್ಗೊಳಬಹುದು. ಇದರಿಂದ ಹೆಚ್ಚು ಆದಾಯ ಬರುತ್ತದೆ ಎಂದು ಟ್ರ್ಯಾಕ್ ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದರು.
ಅಪಾರ ಆಸ್ತಿ ಪತ್ತೆ
ಸಹಕಾರ ನಗರದ ಅಜಿತ್ ರೈ ಮನೆ ಮೇಲೆ ದಾಳಿ ಮಾಡಿದ ವೇಳೆ ಫಾರ್ಮುಲಾ ರೇಸ್ 1ಗೆ ನಿರ್ಮಾಣ ಮಾಡಲು ಸಿದ್ಧಪಡಿಸಿದ್ದ ಯೋಜನೆಯ ನಕ್ಷೆ ಪತ್ತೆಯಾಗಿದ್ದು, ಈ ವಿಚಾರ ಬಹಿರಂಗವಾಗಿದೆ.
ಕೆ.ಆರ್. ಪುರಂ ತಹಸೀಲ್ದಾರ್ ಅಜಿತ್ ರೈರನ್ನು ಲೋಕಾಯುಕ್ತ ಪೊಲೀಸರು ಗುರುವಾರ (ಜೂ.29) ಬಂಧಿಸಿದ್ದಾರೆ. ಎರಡು ದಿನಗಳ ಕಾಲ ತಹಶೀಲ್ದಾರ್ ಮನೆ, ಕಚೇರಿ ಮೇಲೆ ದಾಳಿ ಮಾಡಿ ನಿರಂತರ ಪರಿಶೀಲನೆ ಮಾಡಲಾಗಿದೆ. ಈ ವೇಳೆ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅಜಿತ್ ರೈರನ್ನು ಬಂಧಿಸಲಾಗಿದೆ.
ಅಜಿತ್ ರೈಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳು, ಐಷಾರಾಮಿ ಕಾರು ಮತ್ತು ಬೈಕ್ಗಳನ್ನು ವಶಕ್ಕೆ ಪಡೆದಿದ್ದರು. 4 ಥಾರ್ ಕಾರ್, 4 ಫಾರ್ಚೂನರ್ ಕಾರ್, 3 ರಾಯಲ್ ಎನ್ಫೀಲ್ಡ್, 1 ಲ್ಯಾಂಡ್ ಕ್ರೂಸರ್ (2.5 ಕೋಟಿ ಮೌಲ್ಯ) ಹೊಂದಿದ್ದು, ಎಲ್ಲ ಕಾರಿಗೂ ಒಂದೇ ನಂಬರ್ ರಿಜಿಸ್ಟರ್ ಇದೆ. ಆದರೆ ಇದ್ಯಾವುದಕ್ಕೂ ಅಜಿತ್ ರೈ ಲೆಕ್ಕ ಕೊಡುತ್ತಿಲ್ಲ ಎನ್ನಲಾಗಿದೆ.
ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿವೆ. ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು ಪತ್ತೆಯಾಗಿವೆ. ಬೇನಾಮಿ ಹೆಸರಿನಲ್ಲಿ ಅಜಿತ್ ರೈ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ. (ದಿಗ್ವಿಜಯ ನ್ಯೂಸ್)
ರಾಮ್ಚರಣ್-ಉಪಾಸನಾ ದಂಪತಿಗೆ ಮುಕೇಶ್ ಅಂಬಾನಿಯಿಂದ ಚಿನ್ನದ ತೊಟ್ಟಿಲು ಗಿಫ್ಟ್: ಬೆಲೆ ಕೇಳಿದ್ರೆ ಬೆರಗಾಗ್ತೀರಾ!
ಮೆದುಳು ಹೊರಬಂದು ಸಾಯುವ ಸ್ಥಿತಿಯಲ್ಲಿದ್ದ ಮಹಿಳೆಗೆ ಹಣ ಪಡೆಯದೆ ಚಿಕಿತ್ಸೆ: ಮಾನವೀಯತೆ ಮೆರೆದ ವೈದ್ಯರು
ಹಾವು ಕಚ್ಚಿದ ಬಳಿಕ ಚಿಕಿತ್ಸೆ ಪಡೆದು ಮನೆಗೆ ಮರಳಿದ ವ್ಯಕ್ತಿಗೆ ಮರುದಿನವೇ ಕಾದಿತ್ತು ಬಿಗ್ ಶಾಕ್: ತಪ್ಪಲಿಲ್ಲ ಸಾವು!