More

    ಟೈಲರ್ ರುಂಡ ಕತ್ತರಿಸಿದ ಪುಂಡರಿಬ್ಬರ ಬಂಧನ; ತನಿಖೆಗಾಗಿ ಹತ್ತು ತಂಡಗಳ ರಚನೆ

    ಜೈಪುರ: ಬಿಜೆಪಿಯ ವಿವಾದಿತ ನಾಯಕಿ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಟೈಲರ್ ಕನ್ನಯ್ಯ ಲಾಲ್​ ಅವರ​ ರುಂಡ ಕತ್ತರಿಸಿದ ಪುಂಡರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    ರಾಜಸ್ಥಾನದ ಉದಯಪುರದ ಮಲ್ಡಾಸ್ ಸ್ಟ್ರೀಟ್​ನಲ್ಲಿರುವ ಟೈಲರಿಂಗ್ ಅಂಗಡಿಯೊಳಕ್ಕೆ ಬಂದಿದ್ದ ದುಷ್ಕರ್ಮಿಗಳಿಬ್ಬರ ಪೈಕಿ ಒಬ್ಬಾತ ಬಟ್ಟೆ ಹೊಲಿಸಲು ಕೊಡುವ ಸೋಗಿನಲ್ಲಿ ಒಳಕ್ಕೆ ಹೋಗಿದ್ದ. ಅಲ್ಲಿ ಟೈಲರ್​ ಅಳತೆ ತೆಗೆದುಕೊಂಡು ಬರೆದುಕೊಳ್ಳುವಷ್ಟರಲ್ಲಿ ದಾಳಿ ನಡೆಸಿದ ಇವರು ಹಲ್ಲೆ ಮಾಡಿ, ರುಂಡ ಕತ್ತರಿಸಿ ಪರಾರಿಯಾಗಿದ್ದರು.

    ಘಟನೆ ಬಳಿಕ ಸ್ಥಳದಲ್ಲಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಆತಂಕದ ವಾತಾವರಣ ಉಂಟಾಗಿದ್ದಲ್ಲದೆ, ಪ್ರಕ್ಷುಬ್ಧ ಪರಿಸ್ಥಿತಿ ಸೃಷ್ಟಿಯಾಗಿತ್ತು. ಕೂಡಲೇ ಕಾರ್ಯಾಚರಣೆಗಿಳಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಈ ಕೊಲೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಜೀವ ಬೆದರಿಕೆಯೊಡ್ಡಿದ್ದು, ಆ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.

    ಇದನ್ನೂ ಓದಿ: ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದಾತನ ತಲೆಯೇ ಕಟ್!; ಪ್ರಧಾನಿ ಮೋದಿಗೂ ಕೊಲೆ ಬೆದರಿಕೆ!

    ರಜ್ಸಾಮಂಡ್ ಜಿಲ್ಲೆಯ ಭೀಮ್​ ಪ್ರದೇಶದಲ್ಲಿ ಮುಖ ಕಾಣಿಸದಂಥ ಹೆಲ್ಮೆಟ್ ಹಾಕಿಕೊಂಡು ಬೈಕ್​ನಲ್ಲಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ರಜ್ಸಾಮಂಡ್ ಎಸ್​ಪಿ ಸುಧೀರ್ ಚೌಧರಿ ತಿಳಿಸಿದ್ದಾರೆ. ಬಂಧಿತರೇ ಆರೋಪಿಗಳು ಎನ್ನುವುದು ಖಚಿತವಾಗಿದೆ. ಅಲ್ಲದೆ ತನಿಖೆ ಕೈಗೊಂಡ ಇತರ ಆರೋಪಿಗಳನ್ನೂ ಪತ್ತೆ ಹಚ್ಚಿ ಬಂಧಿಸುವ ಸಲುವಾಗಿ ಹತ್ತು ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ‘ನಮಸ್ಕಾರ ದೇವರು’ ಅಂತ ಹೇಳೋದ್ಯಾಕೆ ಡಾಕ್ಟರ್​ ಬ್ರೋ?; ಹಣ ಬೇಕಾದಾಗ ಯಾವ ಹೋಟೆಲ್​ಗೆ ಹೋಗ್ತಾರೆ!

    ಕಾರಿನ ಗಾಜನ್ನು ಒರೆಸುತ್ತ ಫಾಸ್ಟ್ಯಾಗ್ ಹಣ ಕಬಳಿಸುವವರ ಹಾವಳಿ?; ಹೊರಬಿತ್ತು ಅಸಲಿಯತ್ತು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts