ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕು ಎಂದು ಆಲ್ ಇಂಡಿಯಾ ಬಾರ್ ಅಸೋಸಿಯೇಷನ್ ಆಗ್ರಹ ವ್ಯಕ್ತಪಡಿಸಿದೆ.
ಸುಪ್ರೀಂಕೋರ್ಟ್ನ ಹಿರಿಯ ನ್ಯಾಯಮೂರ್ತಿ ಎನ್.ವಿ. ರಾಮಣ್ಣ ಹಾಗೂ ಆಂಧ್ರಪ್ರದೇಶ ಹೈಕೋರ್ಟ್ನ ನ್ಯಾಯಾಧೀಶರ ವಿರುದ್ಧ ಸಿಎಂ ಜಗನ್ ಅವರು ಮಾಡಿರುವ ಟೀಕೆ ಹಿನ್ನೆಲೆಯಲ್ಲಿ ಈ ಆಗ್ರಹ ಮಾಡಲಾಗಿದೆ.
ನ್ಯಾಯಮೂರ್ತಿ ರಾಮಣ್ಣ ಅವರು ಕೆಲವು ನ್ಯಾಯಾಧೀಶರ ರೋಸ್ಟರ್ ಸೇರಿ ಆಂಧ್ರಪ್ರದೇಶದ ಹೈಕೋರ್ಟ್ ವಿಚಾರಗಳಲ್ಲಿ ಪ್ರಭಾವ ಬೀರುತ್ತಿದ್ದಾರೆ ಎಂಬುದಾಗಿ ಜಗನ್ ಅವರು ಅಕ್ಟೋಬರ್ 6ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಅವರಿಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ಎಲ್ಲ ಬೆಳವಣಿಗೆ ನಡೆದಿದೆ. (ಏಜೆನ್ಸೀಸ್)