More

    ಸಿಎಂ ಜಗನ್​ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಿ; ಬಾರ್ ಅಸೋಸಿಯೇಷನ್​ ಆಗ್ರಹ

    ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕು ಎಂದು ಆಲ್​ ಇಂಡಿಯಾ ಬಾರ್​ ಅಸೋಸಿಯೇಷನ್​ ಆಗ್ರಹ ವ್ಯಕ್ತಪಡಿಸಿದೆ.

    ಸುಪ್ರೀಂಕೋರ್ಟ್​ನ ಹಿರಿಯ ನ್ಯಾಯಮೂರ್ತಿ ಎನ್​.ವಿ. ರಾಮಣ್ಣ ಹಾಗೂ ಆಂಧ್ರಪ್ರದೇಶ ಹೈಕೋರ್ಟ್​ನ ನ್ಯಾಯಾಧೀಶರ ವಿರುದ್ಧ ಸಿಎಂ ಜಗನ್​ ಅವರು ಮಾಡಿರುವ ಟೀಕೆ ಹಿನ್ನೆಲೆಯಲ್ಲಿ ಈ ಆಗ್ರಹ ಮಾಡಲಾಗಿದೆ.

    ನ್ಯಾಯಮೂರ್ತಿ ರಾಮಣ್ಣ ಅವರು ಕೆಲವು ನ್ಯಾಯಾಧೀಶರ ರೋಸ್ಟರ್ ಸೇರಿ ಆಂಧ್ರಪ್ರದೇಶದ ಹೈಕೋರ್ಟ್ ವಿಚಾರಗಳಲ್ಲಿ ಪ್ರಭಾವ ಬೀರುತ್ತಿದ್ದಾರೆ ಎಂಬುದಾಗಿ ಜಗನ್​ ಅವರು ಅಕ್ಟೋಬರ್ 6ರಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಅವರಿಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ಎಲ್ಲ ಬೆಳವಣಿಗೆ ನಡೆದಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts