More

    ರಮೇಶ ಜಾರಕಿಹೊಳಿ ವಿರುದ್ಧ ಕಠಿಣ ಕ್ರಮ ಜರುಗಿಸಿ

    ಹಾವೇರಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

    ನಗರದ ಮೈಲಾರ ಮಹದೇವ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಜಾರಕಿಹೊಳಿ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

    ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ ಮಾತನಾಡಿ, ಕಾಮುಕರು, ಭ್ರಷ್ಟರು ಸೇರಿ ರಚಿಸಿದ ಸರ್ಕಾರದ ಕಾಮದಾಟ ಬಯಲಾಗಿದೆ. ರಮೇಶ ಜಾರಕಿಹೊಳಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತೆ ಹಾಗೂ ಅವರ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯುಸೂಫ್ ಸವಣೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ನಗರಸಭೆ ಸದಸ್ಯ ದಾದಾಪೀರ ಚೂಡಿಗಾರ, ಸುನೀಲ ಜಮಾದಾರ, ಅಬ್ದುಲ್​ರಜಾಕ್ ಜಮಾದಾರ, ಹಾವೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಉಮರ್ ಇನಾಮದಾರ, ಅಲ್ಪಾಜ್ ಹಾವೇರಿ, ಗಂಗಾಧರ ಕಾಗದ, ಉಮ್ಮೀದ ನದಾಫ್, ಮಹಾಲಿಂಗಯ್ಯ ಹಿರೇಮಠ, ರಫೀಕ ನದಾಫ್, ನವೀದ ವರ್ದಿ, ಮುದಸ್ಸರ ಸವಣೂರ, ರಾಜನಗೌಡ ಪಾಟೀಲ, ಆದರ್ಶ ನಾಯಕ ಇತರರು ಪ್ರತಿಭಟನೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts