More

    ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಕೆಲಸ ಮಾಡಿ

    ಯಲಬುರ್ಗಾ: ಕೂಲಿಕಾರರು, ಬಡವರ ಮಕ್ಕಳ ಆರೈಕೆಗಾಗಿ ಕೂಸಿನ ಮನೆ ಅನುಕೂಲ ಕಲ್ಪಿಸಿದೆ ಎಂದು ತಾಪಂ ಇಒ ಸಂತೋಷ ಪಾಟೀಲ್ ಹೇಳಿದರು.

    ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ಯಲಬುರ್ಗಾ-ಕುಕನೂರು ತಾಪಂ ವ್ಯಾಪ್ತಿಯ ಕೂಸಿನ ಮನೆ ಆರೈಕೆದಾರರ ಮೂರನೇ ಹಂತದ ತರಬೇತಿ ಉದ್ಘಾಟಿಸಿ ಮಾತನಾಡಿದರು. ಕೂಸಿನ ಮನೆ ಆರೈಕೆದಾರರು 7 ದಿನ ತರಬೇತಿ ಪಡೆದು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಕೂಸಿನ ಮನೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಬರುವಂತೆ ನೋಡಿಕೊಳ್ಳಬೇಕು ಎಂದರು.

    ತಾಪಂ ಸಹಾಯಕ ನಿರ್ದೇಶಕ ಹನುಮಂತಗೌಡ ಪಾಟೀಲ್ ಮಾತನಾಡಿ, ಗ್ರಾಮೀಣ ಪ್ರದೇಶದ ಬಡವರ ಮಕ್ಕಳಿಗೆ ಕೂಸಿನ ಮನೆ ನೆರವಾಗಲಿದೆ ಎಂದು ಹೇಳಿದರು. ತಾಪಂ ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ, ಲಕ್ಷ್ಮಣ ಕೆರಳ್ಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts