More

    ಸಾವಿನಲ್ಲೂ ಸಾರ್ಥಕತೆ ಮೆರೆದ ಡೇನಿಯಲ್​ ಬಾಲಾಜಿ

    ಚೆನ್ನೈ: ಹೃದಯಾಘಾತದಿಂದ ಮೃತಪಟ್ಟ ಸೌತ್​ ಸಿನಿ ಇಂಡಸ್ಟ್ರಿಯ ಖ್ಯಾತ ಖಳ ನಟ ಡೇನಿಯಲ್​ ಬಾಲಾಜಿ ಸಾವಿನ ಸುದ್ದಿ ಸಿನಿಪ್ರಿಯರಲ್ಲಿ ಆಘಾತವನ್ನುಂಟು ಮಾಡಿದ್ದು, ನಟನ ದಿಢೀರ್ ಅಗಲಿಕೆಯ ಶಾಕ್‌ನಿಂದ ಸಿನಿಪ್ರಿಯರು ಇನ್ನೂ ಹೊರಬಂದಿಲ್ಲ.

    ನಟ ಡೇನಿಯಲ್​ ಬಾಲಾಜಿ ಕನ್ನಡ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಕುಟುಂಬ ಸದಸ್ಯರಾಗಿದ್ದು, ಚಿತ್ರಗಳಲ್ಲಿ ಖಳನಾಯಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ರಾಕಿಂಗ್​ ಸ್ಟಾರ್​ ಯಶ್ ನಟನೆಯ ಕಿರಾತಕ​ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಪದಾರ್ಪಣೆ ಮಾಡಿದ್ದರು. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ ಇವರು ಸಿನಿರಸಿಕರಿಗೆ ಚಿರಪರಿಚಿತರು ಎಂದು ಹೇಳಬಹುದಾಗಿದೆ.

    Daniel Balaji

    ಇದನ್ನೂ ಓದಿ: ಮಹಿಳೆಯರು ಅಡುಗೆ ಮಾಡೋಕೆ ಮಾತ್ರ ಲಾಯಕ್ಕು; ವಿವಾದಾತ್ಮಕ ಹೇಳಿಕೆ ನೀಡಿದ ಶಾಮನೂರು ಶಿವಶಂಕರಪ್ಪ

    ನಟ ಡೇನಿಯಲ್​ ಬಾಲಾಜಿ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಈ ವಿಚಾರ ಅಭಿಮಾನಿಗಳನ್ನು ಮತ್ತಷ್ಟು ಭಾವುಕವಾಗಿಸಿದೆ. ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಡೇನಿಯಲ್​ ಬಾಲಾಜಿ ಕತ್ತಲೆಯಲ್ಲಿದವರ ಬಾಳನ್ನು ಬೆಳಕಾಗಿಸಿದ್ದಾರೆ. ಸಾವಿನ ಸುದ್ದಿ ಕೇಳಿ ಆತಂಕದಲ್ಲಿದ್ದ ಅಭಿಮಾನಿಗಳು ಈ ವಿಷಯ ಕೇಳಿ ಮತ್ತಷ್ಟು ಭಾವುಕರಾಗಿದ್ದಾರೆ.

    ಚೆನ್ನೈನ ಪುರಸೈವಾಲ್ಕಂನಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ತಿರುವನ್ಮಿಯೂರಿನ ಅವರ ನಿವಾಸದಲ್ಲಿ ನಡೆಯಲಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಸಿನಿಮಾ ರಂಗ ಹೊರತುಪಡಿಸಿ ಧಾರ್ಮಿಕ ಕಾರ್ಯಗಳಲ್ಲೂ ಡೇನಿಯಲ್​ ಬಾಲಾಜಿ ಸಕ್ರಿಯರಾಗಿದ್ದು, ಅನೇಕ ದೇವಾಲಯಗಳನ್ನು ಕಟ್ಟಿಸಿದ್ದಾರೆ. ನಟನ ಅಗಲಿಕೆಗೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts