ದಕ್ಷಿಣ ಭಾರತದ ಮತ್ತೋರ್ವ ಖ್ಯಾತ ನಟನನ್ನು ಬಲಿ ಪಡೆದ ಕರೊನಾ! ರಜನಿಕಾಂತ್​ ಜತೆ ನಟಿಸಿದ್ದ ನಟ ಇನ್ನಿಲ್ಲ

blank

ಚೆನ್ನೈ: ಕರೊನಾ ಸೋಂಕು ದೇಶಾದ್ಯಂತ ತನ್ನ ಅಬ್ಬರವನ್ನು ಮುಂದುವರಿಸಿದೆ. ಚಿತ್ರೋದ್ಯಮದ ಹಲವರನ್ನು ಸೋಂಕು ಬಲಿ ತೆಗೆದುಕೊಂಡಿದೆ. ದಕ್ಷಿಣ ಭಾರತದ ನಟರೊಬ್ಬರು ಇಂದು ಸೋಂಕಿಗೆ ಬಲಿಯಾಗಿದ್ದಾರೆ.

ತಮಿಳು ಚಿತ್ರರಂಗದ ಖ್ಯಾತ ನಟ ನಿತೀಶ್ ವೀರಾ(45) ಕರೊನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಕೆಲ ದಿನಗಳ ಹಿಂದೆ ಕರೊನಾ ಸೋಂಕು ದೃಢವಾಗಿದ್ದು, ಚನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಅವರು ಅಸು ನೀಗಿದ್ದಾರೆ.

ನಿತೀಶ್​ ಅವರು ಸುಮಾರು 20 ವರ್ಷಗಳಿಂದ ಕಾಲಿವುಡ್​ನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದರೂ ಅವರಿಗೆ ಹೆಸರು ತಂದುಕೊಟ್ಟಿದ್ದು ಕಾಲಾ ಚಿತ್ರ. ಸೂಪರ್​ ಸ್ಟಾರ್ ರಜನಿಕಾಂತ್​ ಜತೆ ಈ ಚಿತ್ರದಲ್ಲಿ ಕಾಣಿಸಿಕೊಂಡ ನಂತರ ಅವರ ಸ್ಟಾರ್ ಬದಲಾಗಿತ್ತು. ವಲ್ಲರಸು, ಪುದುಪೇಟೈ, ಪೇರರಸು, ನೇಟ್ರ ಇಂಡ್ರು, ಲಾಭಂ, ಅಸುರನ್​, ಪಾಂಡಿಯನ್​, ನೀರೋ ಸೇರಿ ಅನೇಕ ಚಿತ್ರಗಳಲ್ಲಿ ನಿತೀಶ್​ ಬಣ್ಣ ಹಚ್ಚಿದ್ದರು. (ಏಜೆನ್ಸೀಸ್)

17 ನಿಮಿಷಗಳಲ್ಲೇ ನಡೆಯಿತು ಮದುವೆ; ವರದಕ್ಷಿಣೆಯಾಗಿ ಪಡೆದಿದ್ದು ‘ರಾಮಾಯಣ’

ನಿಂತಿದ್ದ ಆ್ಯಂಬುಲೆನ್ಸ್​ ಅಲ್ಲಾಡುತ್ತಿತ್ತು; ಹತ್ತಿರ ಹೋಗಿ ನೋಡಿದ ಪೊಲೀಸರಿಗೆ ಕಂಡಿದ್ದು ಬೇರೆಯದ್ದೇ ದೃಶ್ಯ!

ಸಾಯುತ್ತಿದ್ದ ಅಮ್ಮನಿಗಾಗಿ ವಿಡಿಯೋ ಕಾಲ್​ನಲ್ಲೇ ಹಾಡು ಹೇಳಿದ ಮಗ! ಕಣ್ಣೀರು ತರಿಸುವ ಕಥೆ ಹಂಚಿಕೊಂಡ ಡಾಕ್ಟರ್

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…