More

    ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ; 9 ಮಂದಿ ಸಾವು!

    ಚೆನ್ನೈ: ವಾರದ ಹಿಂದೆಯಷ್ಟೇ ತಮಿಳುನಾಡಿನಲ್ಲಿ ಸಂಭವಿಸಿದ್ದ ಪಟಾಕಿ ದುರಂತದಲ್ಲಿ 9 ಮಂದಿ ಸಾವಿಗೀಡಾಗಿದ್ದರು. ಇದೀಗ ಆ ಪ್ರಕರಣದ ನೆನಪು ಜನರ ಮನಸಲ್ಲಿ ಹಸಿಯಾಗಿರುವಾಗಲೇ ತಮಿಳುನಾಡಿನಲ್ಲಿ ಇನ್ನೊಂದು ಪಟಾಕಿ ದುರಂತ ಸಂಭವಿಸಿದ್ದು, ಇದರಲ್ಲೂ 9 ಮಂದಿ ಸಾವಿಗೀಡಾಗಿದ್ದಾರೆ.

    ತಮಿಳುನಾಡಿನ ವಿರುಧುನಗರ ಜಿಲ್ಲೆಯ ಕಮ್ಮಪಟ್ಟಿ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಕನಿಷ್ಠ 9 ಮಂದಿ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ತುರ್ತು ಹಾಗೂ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ಆರಿಸುವ ಜತೆಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

    ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಬೆಂಗಳೂರಿನ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 8 ಬೈಕ್​ಗಳು ಸುಟ್ಟು ಭಸ್ಮ

    ಶಿವಕಾಸಿಯ ಈ ಪಟಾಕಿ ಕಾರ್ಖಾನೆಯಲ್ಲಿ ಇಂದು ಮಧ್ಯಾಹ್ನದ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಅಗ್ನಿ ಆಕಸ್ಮಿಕ ಸಂಭವಿಸಲು ಕಾರಣ ಏನು ಎಂಬ ಕುರಿತು ಖಚಿತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

    ಇದನ್ನೂ ಓದಿ: ತಮಿಳುನಾಡು| ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 9 ಮಂದಿ ಸಾವು

    ತಮಿಳುನಾಡಿನ ಅರಿಯಲೂರ್ ಜಿಲ್ಲೆಯ ವೆಟ್ರಿಯೂರು ಗ್ರಾಮದ ಬಳಿ ಇರುವ ವೀರಗಾಲೂರು ಸಮೀಪ ಅ. 9ರಂದು ಪಟಾಕಿ ದುರಂತ ಸಂಭವಿಸಿತ್ತು. ಈ ಅವಘಡದಲ್ಲಿ 9 ಮಂದಿ ಸಾವಿಗೀಡಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದರು.

    ಜೊಮ್ಯಾಟೊ ಫುಡ್ ಡೆಲಿವರಿಗೆ ಸ್ಟೈಲಿಶ್ ಬೈಕು, ಚಂದದ ಯುವತಿ!; ಏನಿದರ ರಹಸ್ಯ?

    ರಾತ್ರಿ ಸರಿಯಾಗಿ ನಿದ್ರೆ ಬರದಿದ್ದರೆ ಅದಕ್ಕೆ ಇವೇ ಕಾರಣಗಳಂತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts