More

    ಸಚಿವ ಸುಧಾಕರ್ ಬಿಡುಗಡೆ ಮಾಡಿದರು ‘ತನುಜಾ’ ಚಿತ್ರದ ಟ್ರೈಲರ್​ …

    ಬೆಂಗಳೂರು: ಕರೊನಾ ಸಮಯದಲ್ಲಿ ತನುಜಾ ಎಂಬ ಹುಡುಗಿ, ಶಿವಮೊಗ್ಗದ ಕುಗ್ರಾಮದಿಂದ ಬೆಂಗಳೂರಿಗೆ ಬಂದು ನೀಟ್ ಪರೀಕ್ಷೆ ಬರೆದಿದ್ದು ನೆನಪಿರಬಹುದು. ಆ ಹುಡುಗಿ ಪರೀಕ್ಷೆ ಬರೆಯುವುದಕ್ಕೆ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಚಿವ ಡಾ ಕೆ.ಸುಧಾಕರ್, ಪತ್ರಕರ್ತರಾದ ವಿಶ್ವೇಶ್ವರ್ ಭಟ್ ರವರು ಹಾಗೂ ಪ್ರದೀಪ್ ಈಶ್ವರ್ ಸಾಕಷ್ಟು ಸಹಾಯ ಮಾಡಿದ್ದರು. ಈಗ ಅದೇ ವಿಷಯವನ್ನಿಟ್ಟುಕೊಂಡು ಹರೀಶ್ ಎಂ.ಡಿ ಹೊಸ ಚಿತ್ರ ಮಾಡಿದ್ದಾರೆ. ಹೆಸರು ‘ತನುಜಾ’. ಈ ಚಿತ್ರ ಸದ್ದಿಲ್ಲದೆ ಬಿಡುಗಡೆಗೆ ಸಜ್ಜಾಗಿದ್ದು, ಇತ್ತೀಚೆಗೆ ಟ್ರೈಲರ್​ ಬಿಡುಗಡೆಯಾಗಿದೆ.

    ಇದನ್ನೂ ಓದಿ: ಒಂದೇ ದಿನ ಬಿಡುಗಡೆಯಾಗಲಿದೆ ‘ಯಶೋದ’ ಮತ್ತು ‘ಕಾಂತಾರ’ … ಒಂದು ಅಮೇಜಾನ್​ನಲ್ಲಿ, ಇನ್ನೊಂದು ನೆಟ್​ಫ್ಲಿಕ್ಸ್​ನಲ್ಲಿ

    ಅಂದಹಾಗೆ, ಈ ಚಿತ್ರದ ಟ್ರೈಲರ್​ ಬಿಡುಗಡೆ ಮಾಡಿದ್ದು ಆರೋಗ್ಯ ಸಚಿವ ಕೆ. ಸುಧಾಕರ್​. ಅವರು ಟ್ರೈಲರ್​ ಬಿಡುಗಡೆ ಮಾಡಿದ್ದಷ್ಟೇ ಅಲ್ಲ, ಈ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ.
    ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ನಾನು ಸಮಾನ್ಯವಾಗಿ ಎಲ್ಲರ ಟ್ವಿಟ್ ಫಾಲೋ ಮಾಡುತ್ತಿರುತ್ತೇನೆ. ವಿಶ್ವೇಶ್ವರ ಭಟ್ ಅವರು ತನುಜಾ ನೀಟ್ ಪರೀಕ್ಷೆ ಬರೆಯಲು ಸಹಾಯ ಮಾಡುವಂತೆ ಟ್ವಿಟ್ ಮಾಡಿದ್ದನ್ನು ಗಮನಿಸಿ, ಆ ಹುಡುಗಿ ಪರೀಕ್ಷೆ ಬರೆಯಲು ಸಹಾಯ ಮಾಡುವಂತೆ ದೆಹಲಿಯ ನೀಟ್ ಅಧಿಕಾರಿಗಳ ಜೊತೆ ಮಾತನಾಡಿದ್ದೆ. ಈ ವಿಷಯದಲ್ಲಿ ಯಡಿಯೂರಪ್ಪ ಅವರ ಸಹಕಾರವಂತೂ ಅಪಾರ. ಆಮೇಲೆ ವಿಶ್ವೇಶ್ವರ ಭಟ್ ಅವರು ನಿರ್ದೇಶಕ ಹರೀಶ್ ಅವರನ್ನು ಪರಿಚಯ ಮಾಡಿಸಿ, ‘ತನುಜಾ’ ಕುರಿತಾದ ಸಿನಿಮಾ ಮಾಡುತ್ತಿದ್ದಾರೆ‌ ಎಂದರು. ಹರೀಶ್ ಅವರು ನೀವು ಸಹ ಸಚಿವರಾಗಿಯೇ ಇದರಲ್ಲಿ ಅಭಿನಯಿಸಬೇಕು ಎಂದರು. ಡಾಕ್ಟರ್ ಆಗಿರುವ ನನ್ನನ್ನು ಆಕ್ಟರ್ ಮಾಡಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆ ತನುಜಾ ಅಂದುಕೊಂಡಿದ್ದನ್ನು ಸಾಧಿಸಿ ವೈದ್ಯೆ ಆಗುತ್ತಿದ್ದಾಳೆ. ಈ ‘ತನುಜಾ’ ಕೂwA ಯಶಸ್ವಿಯಾಗಲಿ’ ಎಂದು ಸುಧಾಕರ್ ಹಾರೈಸಿದರು.

    ತಮ್ಮ ಪರಿಚಯಸ್ಥರೊಬ್ಬರ ಮೂಲಕ ಕೋವಿಡ್ ಸಮಯದಲ್ಲಿ ತನುಜಾ ಪರೀಕ್ಷೆ ‌ಬರೆಯಲು ಮುಂದಾಗಿರುವ ವಿಷಯ ತಿಳಿಯಿತು ಎಂದು ಮಾತು ಪ್ರಾರಂಭಿಸಿದ ವಿಶ್ವೇಶ್ವರ ಭಟ್​, ‘ತಕ್ಷಣ ನಾನು ಈ ವಿಷಯದ ಕುರಿತು ಟ್ವೀಟ್ ಮಾಡಿದೆ. ತನುಜಾ ತಾಯಿ ಸಹ ನನಗೆ ಫೋನ್ ಮಾಡಿ ಮಗಳು ಪರೀಕ್ಷೆ ಬರೆಯಲು ಸಹಾಯ ಮಾಡುವಂತೆ ಕೇಳಿಕೊಂಡರು. ನನ್ನ ಮನವಿಗೆ ಸ್ಪಂದಿಸಿ ತನುಜಾ ನೀಟ್ ಪರೀಕ್ಷೆ ಬರೆಯಲು ಸುಧಾಕರ್ ಸಹಾಯ ಮಾಡಿದರು. ಆಗ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರು ಆ ಹುಡಿಗಿಗೆ ತಮ್ಮ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು. ನಾನು ಈ ಘಟನೆಯನ್ನು ಅಂಕಣದಲ್ಲಿ ಬರೆದುಕೊಂಡಿದ್ದೆ. ಅಂಕಣ ಓದ್ದಿದ ಹರೀಶ್ ಚಿತ್ರ ಮಾಡಲು ಮುಂದಾದರು. ಕಷ್ಟಪಟ್ಟು ನಿರ್ಮಾಪಕರನ್ನು ಹುಡುಕಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಈ ಚಿತ್ರವನ್ನು ನೋಡಿ ಹಾರೈಸಿ’ ಎಂದರು.

    ಇದನ್ನೂ ಓದಿ: ಹೊಂಬಾಳೆ ಫಿಲಂಸ್​ ನಿರ್ಮಾಣದ ಬಾಲಿವುಡ್​ ಚಿತ್ರದಲ್ಲಿ ಶಾರೂಖ್​ ಖಾನ್​?

    ‘ತನುಜಾ’ ಪಾತ್ರದಲ್ಲಿ ಸಪ್ತ ಪಾವೂರ್ ನಟಿಸಿದ್ದಾರೆ. ಇನ್ನು, ರಾಜೇಶ್​ ನಟರಂಗ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಂದ್ರಶೇಖರ್ ಗೌಡ ಮತ್ತು ಮನೋಜ್ ಬಿ.ಜಿ ನಿರ್ಮಿಸಿರುವ ಈ ಚಿತ್ರವನ್ನು, ಹರೀಶ್ ಎಂ.ಡಿ ಹಳ್ಳಿ ನಿರ್ದೇಶಿಸಿದ್ದಾರೆ. ಪ್ರದ್ಯೋತನ್​ ಅವರ ಸಂಗೀತ ಈ ಚಿತ್ರಕ್ಕಿದೆ.

    ಹರಿಪ್ರಿಯಾ-ವಸಿಷ್ಠ ಪ್ರೀತಿಗೆ ಕನ್ನಡಿ ಹಿಡಿದಿದ್ದು ಕ್ರಿಸ್ಟಲ್​ ಅಂತೆ … ಯಾರು ಈ ಕ್ರಿಸ್ಟಲ್​?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts