More

    ವಿಶ್ವಾಸ ಹುಸಿಗೊಳಿಸದೆ ಕೆಲಸ ಮಾಡುವೆ : ಬಂಗಾರಪೇಟೆ ಟಿಎಪಿಸಿಎಂಎಸ್ ಅಧ್ಯಕ್ಷ ರಾಜಾರೆಡ್ಡಿ

    ಬಂಗಾರಪೇಟೆ: ರೈತರು ನನ್ನ ಮೇಲಿಟ್ಟಿರುವ ನಂಬಿಕೆಯನ್ನು ಹುಸಿಗೊಳಿಸದೆ, ಸಿಕ್ಕಿರುವ ಅವಕಾಶ ಸದುಪಯೋಗಪಡಿಸಿಕೊಂಡು ಕಾನೂನಿನ ಇತಿಮಿತಿಯಲ್ಲಿ ಪ್ರತಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಟಿಎಪಿಸಿಎಂಎಸ್ ಅಧ್ಯಕ್ಷ ರಾಜಾರೆಡ್ಡಿ ಹೇಳಿದರು.

    ಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಮಾತನಾಡಿ, ಈ ಬಾರಿ ಚುನಾವಣೆಯಲ್ಲಿ ಸಾಮಾನ್ಯ ಸಭೆಗಳಿಗೆ ಹಾಜರಾಗಲಿಲ್ಲ ಎಂಬ ನೆಪವೊಡ್ಡಿ ಮತದಾರರನ್ನು ಮತದಾನ ಪಟ್ಟಿಯಿಂದ ತೆಗೆದುಹಾಕಿದ್ದು, ಹಾಲಿ ಶಾಸಕರು, ಸಂಸದರು ಮತ್ತು ಮಾಜಿ ಶಾಸಕರೆಲ್ಲರೂ ಪಕ್ಷಾತೀತವಾಗಿ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ, ಪ್ರಸ್ತುತ ಇರುವ ಬೈಲಾಗೆ ತಿದ್ದುಪಡಿ ತಂದು ಷೇರು ತುಂಬಿರುವ ಎಲ್ಲರಿಗೂ ಮತ್ತೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದರು.

    ಆಡಳಿತ ನಡೆಸಿದ ಆಡಳಿತ ಮಂಡಳಿಯವರು ಅಧಿಕಾರ ದುರುಪಯೋಗಪಡಿಸಿಕೊಂಡು ಅವ್ಯವಹಾರ ನಡೆಸಿದ್ದನ್ನು ತಿರಸ್ಕರಿಸಿ ನಮಗೆ ಅವಕಾಶ ಮಾಡಿಕೊಟ್ಟಿರುವ ಎಲ್ಲ ರೈತ ಬಾಂಧವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಉಪಾಧ್ಯಕ್ಷ ಟಿ.ಎನ್.ರಾಮೇಗೌಡ ಮಾತನಾಡಿ, ಸರ್ಕಾರದಿಂದ ರೈತರಿಗೆ ಸಿಗುವ ರಸಗೊಬ್ಬರ, ಔಷಧ ಮತ್ತು ಸ್ಟೇಷನರಿ ಸೇರಿ ಎಲ್ಲ ಮೂಲ ಸೌಲಭ್ಯ ತಲುಪಿಸುವ ಕಾರ್ಯ ಮಾಡಲಾಗುವುದು ಎಂದರು. ನಿರ್ದೇಶಕರಾದ ಚಂದ್ರಪ್ಪ, ಹುಣಸನಹಳ್ಳಿ ಎಚ್.ಆರ್.ಶ್ರೀನಿವಾಸ್, ವೆಂಕಟಾಚಲಪತಿ, ತಾಪಂ ಅಧ್ಯಕ್ಷ ಮಹದೇವಪ್ಪ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts