ಆನೇಕಲ್: ಕಳೆದ 22 ದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿರುವ ತೆಲುಗು ಚಿತ್ರ ನಟ ತಾರಕ ರತ್ನ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆ ಬಳಿ ಪೊಲೀಸ್ ಭದ್ರತೆ ಕೂಡ ಹೆಚ್ಚಿಸಲಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ಬಳಿಯ ಬೊಮ್ಮಸಂದ್ರದಲ್ಲಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ತಾರಕ ರತ್ನಗೆ ಚಿಕಿತ್ಸೆ ನೀಡಲಾಗುತ್ತಿದೆ.
ತೆಲುಗುದೇಶಂ ಪಕ್ಷ ಜ. 27ರಂದು ಕುಪ್ಪಂ ಬಳಿ ಆಯೋಜಿಸಿದ್ದ ಪಾದಯಾತ್ರೆ ಸಂದರ್ಭ ತಾರಕ ರತ್ನ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರಿಗೆ ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸುಮಾರು 22 ದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿರುವ ನಟನ ಆರೋಗ್ಯ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿಲ್ಲ ಎನ್ನಲಾಗಿದೆ.
ಹೀಗಾಗಿ ನಟನನ್ನು ಹೈದರಾಬಾದ್ನ ಆಸ್ಪತ್ರೆಗೆ ಸ್ಥಳಾಂತರಿಸಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಆಸ್ಪತ್ರೆಗೆ ಕುಟುಂಬಸ್ಥರು ಆಗಮಿಸಿದ್ದಾರೆ ಎನ್ನುವ ಮಾಹಿತಿ ಕೂಡ ಹರಿದಾಡುತ್ತಿದೆ. ಇಂದು ರಾತ್ರಿ ಅವರನ್ನು ಹೈದರಾಬಾದ್ಗೆ ಶಿಫ್ಟ್ ಮಾಡಲಿದ್ದು, ಆಸ್ಪತ್ರೆ ಬಳಿ ಹೆಚ್ಚಿನ ಜನ ಆಗಮಿಸುತ್ತಾರೆ ಎನ್ನುವ ಕಾರಣಕ್ಕೆ ಬಿಗಿಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ ಎನ್ನಲಾಗುತ್ತಿದೆ.
ಮತ್ತೆ ‘ಸೈಲೆಂಟ್’ ಸದ್ದು: ದೇವಾಲಯದಲ್ಲಿ ಭಕ್ತರಿಗೆ ಕೊಡುವ ಲಡ್ಡು ಪೊಟ್ಟಣಗಳ ಮೇಲೂ ರೌಡಿ ಸುನೀಲನ ಚಿತ್ರ!
ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಅಪ್ಪ-ಮಗನ ಅತ್ಯಾಚಾರ; ಇಸ್ಲಾಂ ಧರ್ಮಕ್ಕೆ ಮತಾಂತರಿಸಲೂ ಯತ್ನ
ಊಟ ಮಾಡುತ್ತಲೇ ಕುಸಿದು ಬಿದ್ದು ಸಾವಿಗೀಡಾದ ನೌಕರ; ಸಿಸಿಟಿವಿಯಲ್ಲಿ ದೃಶ್ಯ ದಾಖಲು