ತಾರಾನಾಥ ವರ್ಕಾಡಿಗೆ ಡಿ.ಲಿಟ್ ಪದವಿ

blank

ಉಡುಪಿ: ಖ್ಯಾತ ಯಕ್ಷಗಾನ ಕಲಾವಿದ, ಪ್ರಸಂಗಕರ್ತ ಹಾಗೂ ಹವ್ಯಾಸಿ ಪತ್ರಕರ್ತ ತಾರಾನಾಥ ವರ್ಕಾಡಿಯವರು ಮಂಡಿಸಿದ ’ಕರಾವಳಿ ಕರ್ನಾಟಕದ ಯಕ್ಷಗಾನ ವೃತ್ತಿ ರಂಗಭೂಮಿಯ ಬಹುಮುಖಿ ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಿ.ಲಿಟ್ ಪದವಿ ನೀಡಿ ಗೌರವಿಸಿದೆ. ಇದು ಯಕ್ಷಗಾನ ವೃತ್ತಿಪರ ಕಲಾವಿದರೋರ್ವರ ಸಾಧನೆ ಎಂಬುದು ಗಮನಾರ್ಹ.

ಕಟೀಲು, ಧರ್ಮಸ್ಥಳ ಮೊದಲಾದ ಮೇಳಗಳಲ್ಲಿ ಸುಮಾರು 4 ದಶಕಗಳ ತಿರುಗಾಟ ನಡೆಸಿದ ವರ್ಕಾಡಿಯವರು ಯಕ್ಷಗಾನ ವೇಷಧಾರಿ ಹಾಗೂ ತಾಳಮದ್ದಳೆ ಅರ್ಥದಾರಿಯಾಗಿ ಜನಮನ್ನಣೆ ಪಡೆದ ಕಲಾವಿದ. ಕನ್ನಡ ಹಾಗೂ ತುಳುವಿನಲ್ಲಿ ಅನೇಕ ಯಕ್ಷಗಾನ ಪ್ರಸಂಗ ರಚಿಸಿದ ಅವರು ಆಯುರ್ವೇದ, ಜ್ಯೋತಿಷ್ಯದಲ್ಲೂ ಪರಿಣತಿ ಹೊಂದಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾಗಿದ್ದ ಅವರ ಬಹುಮುಖ ಚಟುವಟಿಕೆಗಳಿಗಾಗಿ ಅನೇಕ ಸಂಘಸಂಸ್ಥೆಗಳು ಅವರನ್ನು ಗೌರವಿಸಿವೆ.

ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶ

ಆನಂದ ಸಿ.ಕುಂದರ್‌ಗೆ ಕೀರ್ತಿ ಕಲಶ ಪುರಸ್ಕಾರ

 

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…