More

    ಟಾಟಾ ಏಸ್‌ಗೆ ಇಬ್ಬರು ಸವಾರರು ಬಲಿ

    ಬೆಂಗಳೂರು: ವೇಗವಾಗಿ ಬಂದ ಟಾಟಾ ಏಸ್, ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ.

    ಅಂಧ್ರಹಳ್ಳಿ ನಿವಾಸಿಗಳಾದ ಫಾರೂಕ್ (18) ಹಾಗೂ ಅಬ್ರಾರ್ ಅಹಮದ್ (18) ಮೃತಪಟ್ಟವರು. ಸಿದ್ಧಿಕ್ (19) ಎಂಬಾತ ಗಾಯಗೊಂಡಿದ್ದು, ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಡಿಕ್ಕಿ ಹೊಡೆದ ಟಾಟಾ ಏಸ್ ಚಾಲಕ, ಸ್ಥಳದಲ್ಲಿ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಫಾರೂಕ್, ಅಬ್ರಹಾಂ ಮತ್ತು ಸಿದ್ಧಿಕ್ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಜತೆಗೆ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ರಂಜಾನ್ ಉಪವಾಸ ಮುಗಿಸಿ ತಂದೆ ಬಳಿ ಹಣ ಪಡೆದು ಚಪ್ಪಲಿ ಖರೀದಿಸಲು ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದರು.
    ಮಂಗಳವಾರ ರಾತ್ರಿ 11ರಲ್ಲಿ ಅಂಧ್ರಹಳ್ಳಿ ಮುಖ್ಯರಸ್ತೆ ಕಡೆಯಿಂದ ಪೀಣ್ಯ 2ನೇ ಹಂತದ ಕಡೆಗೆ ವೇಗವಾಗಿ ಹೋಗುತ್ತಿದ್ದರು. ಈ ವೇಳೆ ಟಾಟಾ ಏಸ್ ಚಾಲಕ ಸಹ ವೇಗವಾಗಿ ಬಂದಿದ್ದು, ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಗುದ್ದಿದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಫಾರೂಕ್, ಅಬ್ರಾರ್‌ನನ್ನು ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು.

    ಮಾರ್ಗ ಮಧ್ಯೆಯೇ ಗಾಯಾಳು ಮೃತಪಟ್ಟಿದ್ದಾಗಿ ವೈದ್ಯರು ದೃಢಪಡಿಸಿದ್ದಾರೆ. ಮತ್ತೊಬ್ಬನನ್ನು ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್‌ಗೆ ದಾಖಲು ಮಾಡಲಾಗಿದೆ. ಟಾಟಾ ಏಸ್ ಚಾಲಕ ನಿರ್ಲಕ್ಷ್ಯ ಮತ್ತು ಅತೀ ವೇಗದ ಚಾಲನೆ ಹಾಗೂ ಸವಾರರು ಹೆಲ್ಮೆಟ್ ಧರಿಸದೆ ಇದ್ದಿದ್ದು, ಸಾವಿಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಪೀಣ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts