More

    ಮೈತ್ರಿ ಅಭ್ಯರ್ಥಿಗೆ ಚುನಾವಣೆಯಲ್ಲಿ ಪಾಠ ಕಲಿಸಿ

    ಅರಕಲಗೂಡು: ಮುಗ್ಧ ಮತದಾರರನ್ನು ವಂಚಿಸುವ ಮೂಲಕ ಸುಳ್ಳನ್ನು ಬಂಡವಾಳ ಮಾಡಿಕೊಂಡಿರುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಬೇಕು ಎಂದು ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್‌ಗೌಡ ಮನವಿ ಮಾಡಿದರು.

    ತಾಲೂಕಿನ ಕೊರಟಿಕೆರೆ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ದೊಡ್ಡಮಗ್ಗೆ ಹೋಬಳಿ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಚುನಾವಣೆಯಲ್ಲೂ ಒಂದಿಲ್ಲೊಂದು ಹಸಿ ಸುಳ್ಳು ಹೇಳಿಕೊಂಡು ಅಧಿಕಾರ ಅನುಭವಿಸಿ ಮತದಾರರನ್ನು ವಂಚಿಸುತ್ತಿರುವ ರಾಜಕಾರಣಿಗಳನ್ನು ಜನತೆ ಅರ್ಥ ಮಾಡಿಕೊಳ್ಳಬೇಕು ಎಂದರು.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಕಾರಣರಾಗಿದ್ದ ಎಂ.ಟಿ. ಕೃಷ್ಣೇಗೌಡ ಇದೀಗ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗುತ್ತಿರುವುದು ತರವಲ್ಲ. ಚುನಾವಣೆ ಸಂದರ್ಭದಲ್ಲಿ ಜತೆಯಲ್ಲಿದ್ದ ಮುಖಂಡರು, ಕಾರ್ಯಕರ್ತರ ಕೈಗೆ ಸಿಗದೆ 11ತಿಂಗಳಿಂದ ದೂರವಾಗಿದ್ದರು. ಒಮ್ಮೆಯೂ ಬೆಂಬಲಿಸಿದವರ ಕಷ್ಟ ಸುಖ ಕೇಳಿಲ್ಲ. ಇತ್ತೀಚೆಗೆ ಜೆಡಿಎಸ್ ಮುಖಂಡರನ್ನು ಭೇಟಿಯಾಗಿ ಜೆಡಿಎಸ್-ಬಿಜೆಪಿ ಬೆಂಬಲಿತ ಅಭ್ಯಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರು ಗೆಲುವು ಸಾಧಿಸುವುದರಲ್ಲಿ ಅನುಮಾನವಿಲ್ಲ. ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಧಿಕ ಮತ ಕೊಡಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಮುಖಂಡರು, ಕಾರ್ಯಕರ್ತರ ಸಭೆ ನಡೆಸಲಾಗುತ್ತಿದೆ. ಕೃಷ್ಣೇಗೌಡರ ಜತೆಯಲ್ಲಿದ್ದವರೂ ಅಧಿಕ ಸಂಖ್ಯೆಯಲ್ಲಿ ಪಕ್ಷ ಸೇರುತಿದ್ದಾರೆ ಎಂದರು.

    ಮುಖಂಡರಾದ ಪುಟ್ಟಯ್ಯ, ಗಣಪತಿ, ಚಿಕ್ಕಹೊನ್ನೇಗೌಡ, ವೀರಪ್ಪ, ಧರ್ಮಣ್ಣ, ಗ್ರಾಪಂ ಸದಸ್ಯರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts