More

    ಶಿಕ್ಷಕರ ದಿನ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಡಿಸಿ ಎಸ್.ಅಶ್ವಥಿ ಸೂಚನೆ

    ಮಂಡ್ಯ: ಜಿಲ್ಲೆಯಲ್ಲಿ ಸೆ.5 ರಂದು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಶಿಕ್ಷಕರ ದಿನ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್‌.ಅಶ್ವಥಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಿರಿಯ, ಹಿರಿಯ ಮತ್ತು ಪ್ರೌಢ ಶಾಲೆಗಳ ಹಂತದಲ್ಲಿ ಜಿಲ್ಲಾ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದವರಿಗೆ ಸನ್ಮಾನ ಮಾಡಿ, ದಕ್ಷಿಣ ವಲಯ ಮತ್ತು ಉತ್ತರ ವಲಯದ ನಿವೃತ್ತ ಶಿಕ್ಷಕರಿಗೆ ಅಭಿನಂದನೆ, ಊಟದ ವ್ಯವಸ್ಥೆ ಇನ್ನಿತರ ಮೂಲ ಸೌಕರ್ಯ ಕಲ್ಪಿಸಲು ಕ್ರಮವಹಿಸಿ. ದಿನಾಚರಣೆ ವ್ಯವಸ್ಥಿತವಾಗಿ ನಡೆಸಲು ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ವಹಿಸಬೇಕು ಎಂದರು.
    ಜಿ.ಪಂ ಉಪಕಾರ್ಯದರ್ಶಿ ಸರಸ್ವತಿ, ಡಿಡಿಪಿಐ ಜವರೇಗೌಡ, ಮೀರಾ ಶಿವಲಿಂಗಯ್ಯ, ಕೆ.ನಾಗೇಶ್, ಮಂಜುನಾಥ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts