ಬೆಂಗಳೂರು: ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ವಿಳಂಬವಾಗಿದ್ದು, ಆ ಪ್ರಕ್ರಿಯೆಯನ್ನು ತಡಮಾಡದೇ ಶುರುಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನಕಾರ್ಯದರ್ಶಿಗೆ ಆದೇಶಿಸಿದ್ದರು. ಇದರ ಬೆನ್ನಿಗೇ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಫೇಸ್ಬುಕ್/ ಟ್ವಿಟರ್ ಖಾತೆಯಲ್ಲಿ ಈ ಸಂಬಂಧ ಅಪ್ಡೇಟ್ ನೀಡಿದ್ದಾರೆ.
ಇದರಂತೆ, ನವೆಂಬರ್ ಐದರಿಂದ ಶಿಕ್ಷಕರ ವರ್ಗಾವಣಾ ಪ್ರಕ್ತಿಯೆ ಪ್ರಾರಂಭವಾಗಲಿದೆ. ಈಗಾಗಲೇ ಭರವಸೆ ನೀಡಿರುವಂತೆ ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣಾ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಮೊದಲು ಆದ್ಯತೆ ಸಿಗಲಿದ್ದು, ಈ ನಿಟ್ಟಿನಲ್ಲಿ ಕೂಡಲೇ ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ಶಿಕ್ಷಣ ವ್ಯಾಪಾರವೇ- ಶಿಕ್ಷಣ ಸಂಸ್ಥೆಗಳು ವ್ಯಾಪಾರಿ ಸಂಸ್ಥೆಗಳೇ?: ಪರಿಶೀಲಿಸಲಿದೆ ಸುಪ್ರೀಂ ಕೋರ್ಟ್
ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ವೇಳಾಪಟ್ಟಿಯನ್ನು ಇಲಾಖೆ ನಾಳೆ ಪ್ರಕಟಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ. ಇದರೊಂದಿಗೆ ಬಹುಕಾಲ ವಿಳಂಬವಾಗಿದ್ದ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ಸಿಕ್ಕಂತಾಗಿದೆ.
ನವೆಂಬರ್ 5 ರಿಂದ ಶಿಕ್ಷಕರ ವರ್ಗಾವಣಾ ಪ್ರಕ್ತಿಯೆ ಪ್ರಾರಂಭವಾಗಲಿದೆ.
ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆಗೆ ಒಳಗಾದ ಶಿಕ್ಷಕರಿಗೆ ಮೊದಲು ಆದ್ಯತೆ ಸಿಗಲಿದೆ.
ಈ ನಿಟ್ಟಿನಲ್ಲಿ ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ಹೊರಡಿಸಲು ಸಾ.ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ.
ನಾಳೆ ವೇಳಾಪಟ್ಟಿ ಪ್ರಕಟವಾಗಲಿದೆ.
— S.Suresh Kumar, Minister – Govt of Karnataka (@nimmasuresh) October 21, 2020
ವಾರದೊಳಗೆ ಶಿಕ್ಷಕರ, ಉಪನ್ಯಾಸಕರ ವರ್ಗಾವಣೆ ಕೂಡಲೇ ಆರಂಭಿಸುವಂತೆ ಸಿಎಂ ತಾಕೀತು