ಗೌತಿ ಬೇಡಿಕೆಗೆ ಕಡೆಗೂ ಮಣಿದ ಬಿಸಿಸಿಐ; ಸಹಾಯಕ ಸಿಬ್ಬಂದಿಯಾಗಿ ಇವರ ಆಯ್ಕೆ ಫಿಕ್ಸ್​

Gautam Shah

ನವದೆಹಲಿ: ಜುಲೈ 27ರಿಂದ ಆರಂಭವಾಗಲಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಹಾಗೂ ಏಕದಿನ ಸರಣಿಗೆ ಬಿಸಿಸಿಐ ಈಗಾಗಲೇ ತಂಡವನ್ನು ಪ್ರಕಟಿಸಿದ್ದು, ಟೀಮ್​ ಇಂಡಿಯಾ ಈ ಸರಣಿಯನ್ನು ನೂತನ ಕೋಚ್​ ಗೌತಮ್​ ಗಂಭೀರ್​ ಅವರ ನೇತೃತ್ವದಲ್ಲಿ ಆಡಲಿದೆ. ನೂತನ ಕೋಚ್​ ಗೌತಮ್​ ಗಂಭೀರ್​ ಅವರ ಮುಂದೆ ಬೆಟ್ಟದಷ್ಟು ಸವಾಲಿದ್ದು, ಅವರು ತಂಡವನ್ನು 2025ರಲ್ಲಿ ಚಾಂಪಿಯನ್ಸ್​ ಟ್ರೋಫಿ, ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​, 2026ರಲ್ಲಿ ಟಿ20 ವಿಶ್ವಕಪ್​, 2027ರಲ್ಲಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ಗೆ ಸಜ್ಜುಗೊಳಿಸಬೇಕಿದೆ.

ತಂಡದಲ್ಲಿ ಕೆಲವೊಂದು ಬದಲಾವಣೆಗಳತ್ತ ಗಮನ ಹರಿಸಿರುವ ಗಂಭೀರ್​ ಪ್ರಸ್ತುತ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್​ ಕೋಚ್​ ಸೇರಿದಂತೆ ಮಹತ್ವದ ಬದಲಾವಣೆಯತ್ತ ಗಮನ ಹರಿಸಿದ್ದಾರೆ. ಟಿ20 ವಿಶ್ವಕಪ್‌ ಫೈನಲ್ ಪಂದ್ಯದೊಂದಿಗೆ ರಾಹುಲ್ ದ್ರಾವಿಡ್ ಅಧಿಕಾರಾವಧಿ ಕೊನೆಗೊಂಡಿದ್ದು, ಇವರ ಜೊತೆಗೆ ಬ್ಯಾಟಿಂಗ್​ ಕೋಚ್​ ವಿಕ್ರಮ್​ ರಾಥೋಡ್​, ಬೌಲಿಂಗ್​ ಕೋಚ್​ ಪರಾಸ್​ ಮಂಬ್ರೆ ಮತ್ತು ಫೀಲ್ಡಿಂಗ್​ ಕೋಚ್​ ಟಿ. ದಿಲೀಪ್​ ಅವರ ಅವಧಿಯು ಸಹ ಮುಕ್ತಾಯವಾಗಲಿದೆ. ಅವರ ಸ್ಥಾನಕ್ಕೆ ಬದಲಿ ಕೋಚ್​ಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಗಂಭೀರ್ ಮುಂದಾಗಿದ್ದು, ಈ ಮೂಲಕ ಟೀಮ್​ ಇಂಡಿಯಾದಲ್ಲಿ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದ್ದಾರೆ.

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡವು ಸೋಮವಾರವೇ ಕೊಲಂಬೋಗೆ ಹಾರಲಿದ್ದು, ಇದಕ್ಕೂ ಮುನ್ನ ಮುಂಬೈನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೌತಮ್​ ಗಂಭೀರ್​ರನ್ನು ಔಪಚಾರಿಕವಾಗಿ ಟೀಮ್​ ಇಂಡಿಯಾ ಕೋಚ್​ ಎಂದು ಘೋಷಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಏಕದಿನ ತಂಡದ ನಾಯಕ ರೋಹಿತ್​ ಶರ್ಮಾ ಹಾಗೂ ಟಿ20 ಕ್ಯಾಪ್ಟನ್​ ಸೂರ್ಯಕುಮಾರ್​ ಯಾದವ್​ ಕೂಡ ಇರಲಿದ್ದಾರೆ. ಇದರ ಜೊತೆಗೆ ಸಹಾಯಕ ಸಿಬ್ಬಂದಿಯ ಹೆಸರನ್ನು ಘೋಷಿಸಲಾಗುತ್ತದೆ.

Nayar Gambhir

ಇದನ್ನೂ ಓದಿ: ದ್ವಿಚಕ್ರ ವಾಹನಕ್ಕೆ ನಾಯಿಯನ್ನು ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ವ್ಯಕ್ತಿ; ಅಮಾನವೀಯ ವಿಡಿಯೋ ವೈರಲ್​

ಕ್ರಿಕ್​ಬಜ್​ ವರದಿ ಮಾಡಿರುವ ಪ್ರಕಾರ ಟೀಮ್​ ಇಂಡಿಯಾದ ಫೀಲ್ಡಿಂಗ್ ಕೋಚ್ ಆಗಿದ್ದ ದಿಲೀಪ್ ಅವರ ಅವಧಿ ಮತ್ತೆ ವಿಸ್ತರಣೆಯಾಗುವುದು ಖಚಿತ ಎಂದು ಪರಿಗಣಿಸಲಾಗಿದೆ. ದಿಲೀಪ್ ಅವರು ಫೀಲ್ಡಿಂಗ್ ಕೋಚ್ ಆಗಿ ಡ್ರೆಸ್ಸಿಂಗ್ ರೂಮ್‌ನಲ್ಲಿ ಉತ್ತಮ ವಾತಾವರಣ ಸೃಷ್ಟಿಸಿದ್ದು, ಆಟಗಾರರೊಂದಿಗೆ ಉತ್ತಮ ಭಾಂದವ್ಯವನ್ನು ಹೊಂದಿದ್ದಾರೆ. ಹೀಗಾಗಿಯ ಫೀಲ್ಡಿಂಗ್​ ಕೋಚ್​ ಆಗಿ ದಿಲೀಪ್​ ಅವರು ಮುಂದುವರೆಯುವುದು ಬಹುತೇಕ ಖಚಿತವಾಗಿದೆ.

ಇದಲ್ಲದೆ ಅಭಿಷೇಕ್ ನಾಯರ್ ಮತ್ತು ರಿಯಾನ್ ಟೆನ್ ಡೋಸ್ಚೇಟ್ ಇಬ್ಬರನ್ನೂ ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್‌ಗೆ ಸಹಾಯಕರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಬೌಲಿಂಗ್​ ಕೋಚ್​ ಸ್ಥಾನಕ್ಕೆ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮಾರ್ನ್​ ಮಾರ್ಕೆಲ್​ ಹೆಸರು ಕೇಳಿ ಬರುತ್ತಿದ್ದು, ಸೋಮವಾರದ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಇನ್ನೊಂದು ವಿಶೇಷ ಏನೆಂದರೆ ಇವರೆಲ್ಲರೂ ಐಪಿಎಲ್​ನಲ್ಲಿ ಕಲ್ಕತ್ತಾ ನೈಟ್​ರೈಡರ್ಸ್​ ತಂಡವನ್ನು ಪ್ರತಿನಿಧಿಸಿದ್ದಾರೆ.

Share This Article

ಬೇಸಿಗೆಯ ಆರೋಗ್ಯಕ್ಕಾಗಿ ಇವುಗಳಿಗೆ ವಿದಾಯ ಹೇಳಿ! ಇಲ್ಲದಿದ್ದರೆ ಅನಾರೋಗ್ಯಕ್ಕೊಳಗಾಗುವುದು ಖಂಡಿತ Summer Foods

Summer Foods : ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ದೇಹದ ಉಷ್ಣತೆಯು ಸ್ವಾಭಾವಿಕವಾಗಿ ಹೆಚ್ಚಾಗುತ್ತದೆ. ಆದ್ದರಿಂದ ದೇಹವನ್ನು…

ಈ ಕೆಟ್ಟ ಅಭ್ಯಾಸಗಳು ನಿಮ್ಮ ಮನೆಯ ಶಾಂತಿ, ನೆಮ್ಮದಿ ಕೆಡಿಸುತ್ತವೆ! ಹುಷಾರ್​…Vastu Tips

Vastu Tips:  ನಮ್ಮ ದೈನಂದಿನ ಅಭ್ಯಾಸಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳು ಸಹ ನಮ್ಮ ಮನೆಯ ವಾಸ್ತುಗೆ…

ರಾತ್ರಿ ಬಾಯಿ ತೆರೆದು ಮಲಗುವುದು ಆರೋಗ್ಯಕ್ಕೆ ಒಳ್ಳೆಯದಲ್ಲ! ಇಂದೇ ಈ ಅಭ್ಯಾಸ ಬಿಟ್ಟು ಬಿಡಿ.. Sleeping Disorder

Sleeping Disorder : ಸಾಮಾನ್ಯವಾಗಿ ನಿದ್ದೆ ಮಾಡುವಾಗ ಕೆಲವರಿಗೆ  ಬಾಯಿ ತೆರೆದುಕೊಂಡು ಮಲಗುವ ಅಭ್ಯಾಸ ಇರುತ್ತದೆ.…