More

    ಲಂಡನ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಹುಬ್ಬಳ್ಳಿಯ ಟೆಕ್ಕಿ; 50ದಿನಗಳ ಬಳಿಕ ಊರಿಗೆ ಬರುತ್ತಿದೆ ಮೃತದೇಹ

    ಹುಬ್ಬಳ್ಳಿ: ಲಂಡನ್​​ನಲ್ಲಿ ನೆಲೆಸಿದ್ದ ಹುಬ್ಬಳ್ಳಿ ಮೂಲದ ಟೆಕ್ಕಿಯೋರ್ವ ಅಲ್ಲಿ ಆತ್ಮಹತ್ಯೆ ಮಾಡಿಕೊಂಡು 50 ದಿನಗಳು ಕಳೆದಿವೆ. ಈಗ ಅವರ ಶವವನ್ನು ಭಾರತಕ್ಕೆ ತಂದು, ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತಿದೆ.

    ಹುಬ್ಬಳ್ಳಿ ನವನಗರದ ಟೆಕ್ಕಿ ಗದಿಗೆಪ್ಪಗೌಡ ಪಾಟೀಲ್​ ಲಂಡನ್​​ನಲ್ಲಿ ಪತ್ನಿ ಶಿವಲೀಲಾ, ಮಗ ಶಿವಾನಂದ್​ ಪಾಟೀಲ್​ ಹಾಗೂ ಪತ್ನಿಯ ಸಹೋದರನೊಂದಿಗೆ ಲಂಡನ್​​ನಲ್ಲಿ ವಾಸವಾಗಿದ್ದರು. ಮಾ.13ರಂದೇ ಆತ್ಮಹತ್ಯೆ ಮಾಡಿಕೊಂಡಿದ್ದರು.

    ಇದನ್ನೂ ಓದಿ: ಮತ್ತೊಂದು ದುರಂತ: ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಲಾರಿ ಪಲ್ಟಿ, 5 ಮಂದಿ ಸಾವು

    ಹುಬ್ಬಳ್ಳಿಯಲ್ಲಿರುವ ಅವರ ಕುಟುಂಬಸ್ಥರಿಗೆ ಗದಿಗೆಪ್ಪ ಅವರ ಅಂತ್ಯಕ್ರಿಯೆಯನ್ನು ಊರಲ್ಲೇ ಮಾಡಬೇಕು..ಕೊನೇ ಬಾರಿ ಅವರ ಮುಖ ನೋಡಬೇಕು ಎಂಬ ಆಸೆ. ಆದರೆ ಲಾಕ್​ಡೌನ್​ನಿಂದಾಗಿ ಅದು ಸಾಧ್ಯವಾಗಿರಲಿಲ್ಲ. ಇದೇ ಕಾರಣಕ್ಕೆ 50 ದಿನಗಳಾದರೂ ಶವವನ್ನು ಹಾಗೇ ಇಡಲಾಗಿದೆ. ಇಂದು ಬೆಂಗಳೂರಿಗೆ ಬರಲಿದ್ದು, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಹುಬ್ಬಳ್ಳಿಗೆ ಕೊಂಡೊಯ್ಯಲಾಗುವುದು ಎನ್ನಲಾಗಿದೆ.

    ಈಗ ಕೇಂದ್ರ ಸರ್ಕಾರ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕೇಂದ್ರ ಸರ್ಕಾರ ವಾಪಸ್​ ಕರೆತರುವ ಪ್ರಯತ್ನ ಮಾಡುತ್ತಿದೆ. ಗದಿಗೆಪ್ಪ ಪಾಟೀಲ್​ ಅವರ ಕುಟುಂಬದವರೂ ಸಹ 15 ದಿನಗಳ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅವರ ಬಳಿ ಮನವಿ ಮಾಡಿದ್ದರು. ಕೇಂದ್ರ ಆರೋಗ್ಯ ಇಲಾಖೆ, ಲಂಡನ್​ ಸರ್ಕಾರದ ಜತೆ ಮಾತುಕತೆ ನಡೆಸಿತ್ತು.

    ಇದನ್ನೂ ಓದಿ: ವಲಸೆ ಕಾರ್ಮಿಕರನ್ನು ಕದ್ದುಮುಚ್ಚಿ ಕಳಿಸಲು ಪ್ರಯತ್ನಿಸಿ ಸಿಕ್ಕಿಬಿದ್ದ ಗ್ರಾಪಂ ಉಪಾಧ್ಯಕ್ಷ

    ಇದೀಗ ಮೃತದೇಹವನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ. ಹಾಗೇ ಗದಿಗೆಪ್ಪ ಅವರ ಪತ್ನಿ, ಮಗು ಕೂಡ ಭಾರತಕ್ಕೆ ಬರಲಿದ್ದಾರೆ.

    ಪಿಯುಸಿವರೆಗಿನ ಪಾಠ ಇನ್ಮುಂದೆ ಮನೆಯಲ್ಲಿಯೇ ಉಚಿತವಾಗಿ ಕಲಿಯಬಹುದು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts