More

    ಮದುವೆ ದಿಬ್ಬಣದಲ್ಲಿ ಶುರುವಾದ ಗಲಾಟೆ; ಓರ್ವನ ಕೊಲೆಯಲ್ಲಿ ಅಂತ್ಯ

    ಲಖನೌ: ಮದುವೆ ದಿಬ್ಬಣದಲ್ಲಿ ಡ್ಯಾನ್ಸ್​ ಆಡುವ ವಿಚಾರವಾಗಿ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರಪ್ರದೇಶದ ಸುಲ್ತಾನಪುರ ಜಿಲ್ಲೆಯ ಮಾಧವಪುರ ಬೆಳವಾಯಿ ಎಂಬ ಗ್ರಾಮದಲ್ಲಿ ನಡೆದಿದೆ.

    ಘಟನೆಯು ಶುಕ್ರವಾರ ರಾತ್ರಿ 9:30ರ ಸುಮಾರಿಗೆ ನಡೆದಿದ್ದು, ಮೃತ ದುರ್ದೈವಿಯನ್ನು ಸೂರಜ್ (17) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಹಲವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇದನ್ನೂ ಓದಿ: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಐದು ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

    ಈ ಕುರಿತು ಪ್ರತಿಕ್ರಿಯಿಸಿರುವ ಬೆಳವಾಯಿ ಪೊಲೀಸ್​ ಠಾಣಾಧಿಕಾರಿ ಶೈಲೇಂದ್ರ ಪ್ರತಾಪ್​ ಸಿಂಗ್​, ಬೆಳವಾಯಿ ಗ್ರಾಮದ ನಿವಾಸಿ ಶ್ಯಾಮ್​ಲಾಲ್​​ ಅವರ ನಿವಾಸದಲ್ಲಿ ಘಟನೆ ನಡೆದಿದ್ದು, ಡ್ಯಾನ್ಸ್​ ಆಡುವ ವಿಚಾರವಾಗಿ ವರನ ಮತ್ತು ವಧುವಿನ ಕಡೆಯವರಿಗೆ ಗಲಾಟೆಯಾಗಿದೆ. ಈ ವೇಳೆ ಅಪರಿಚಿತ ವ್ಯಕ್ತಿಯೋರ್ವ ಸೂರಜ್​ ಸಹೋದರ ಸಚಿನ್​ನನ್ನು ಥಳಿಸಿದ್ದಾನೆ.

    ಹಲ್ಲೆ ಮಾಡಿರುವ ಬಗ್ಗೆ ಸಚಿನ್​ ತನ್ನ ಸಹೋದರನ ಬಳಿ ಹೇಳಿಕೊಂಡಿದ್ದು, ಈ ಬಗ್ಗೆ ವಿಚಾರಿಸಲು ತೆರಳಿದಾಗ ಆತನ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಅಪರಿಚಿತ ವ್ಯಕ್ತಿಗಳು ಪರಾರಿಯಾಗಿದ್ದಾರೆ. ಕೂಡಲೇ ಗಾಯಾಳುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಸಚಿನ್​ ಹಾಗೂ ಅಜಯ್​ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೆಳವಾಯಿ ಪೊಲೀಸ್​ ಠಾಣಾಧಿಕಾರಿ ಶೈಲೇಂದ್ರ ಪ್ರತಾಪ್​ ಸಿಂಗ್​ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts