ಹೈದರಾಬಾದ್: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ಜಯಂತಿ ಪ್ರಯುಕ್ತ ಅವರ 125 ಅಡಿ ಉದ್ದದ ಪ್ರತಿಮೆಯನ್ನು ತೆಲಂಗಾಣದ ರಾಜಧಾನಿ ಹೈದರಾಬಾದಿನಲ್ಲಿ ಲೋಕಾರ್ಪಣೆ ಮಾಡಲಾಗಿದೆ.
ಭಾರತದಲ್ಲಿ ಅಂಬೇಡ್ಕರ್ ಅವರ ಅತಿ ಎತ್ತರವಾದ ಪ್ರತಿಮೆಯಾಗಿದ್ದು ಹೈದರಾಬಾದಿನ ಹುಸೇನ್ಸಾಗರ್ ಸರೋವರದ ದಡದಲ್ಲಿ ನಿರ್ಮಿಸಲಾಗಿದೆ. ಇದರ ಉದ್ಘಾಟನಾ ಕಾರ್ಯವನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹಾಗೂ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ನೆರವೇರಿಸಿದರು.
ಎಲ್ಲರಿಗೂ ಸ್ಪೂರ್ತಿ ನೀಡುತ್ತದೆ
ಇನ್ನು ಪ್ರತಿಮೆ ಉದ್ಘಾಟನೆ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ರಾಜ್ಯ ಸಚಿವಾಲಯದ ಪಕ್ಕ ಸ್ಥಾಪಿಸಿರುವ ಅಂಬೇಡ್ಕರ್ ಅವರ ಪ್ರತಿಮೆ ಜನರಿಗೆ ಹಾಗೂ ಆಡಳಿತ ವರ್ಗಕ್ಕೆ ಸ್ಪೂರ್ತಿ ನೀಡುತ್ತದೆ.
98 ವರ್ಷದ ಶಿಲ್ಪಿ ರಾಮ್ ವಾಂಜಿ ಸುತಾರ್ ಪ್ರತಿಮೆ ನಿರ್ಮಾಣದಲ್ಲಿ ನಮ್ಮ ಜೊತೆ ಕೈ ಜೋಡಿಸಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಆರ್ ಪ್ರಶಂಶಿಸಿದ್ಧಾರೆ.
ಸನ್ಮಾನ
ತೆಲಂಗಾಣ ಸರ್ಕಾರ ವತಿಯಿಂದ ಪದ್ಮಭೂಷಣ ಪ್ರಶ್ತಿ ಪುರಸ್ಕೃತರಾದ ರಾಮ್ ವಾಂಜಿ ಸುತಾರ್ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ತೆಲಂಗಾಣ ಸಚಿವ ಸಂಪುಟದ ಸದಸ್ಯರು, ಶಾಸಕರು ಹಾಗೂ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಜನ ಸೇರಿದ್ದರು ಎಂದು ಹೇಳಲಾಗಿದೆ. ಎಲ್ಲರಿಗೂ ಮಜ್ಜಿಗೆ, ಸಿಹಿ ತಿನಿಸು, ಬೋಜನ ಹಾಗೂ ನೀರಿನ ಪ್ಯಾಕೆಟ್ಗಳ ವ್ಯವಸ್ಥೆಯನ್ನು ಸರ್ಕಾರದ ವತಿಯಿಂದ ಮಾಡಲಾಗಿತ್ತು.