ತೆಲಂಗಾಣ: ಮನೋ ರೋಗಿಗಳು ಮತ್ತು ಮಾನಸಿಕ ಅಸ್ವಸ್ಥರನ್ನು ಸರಪಳಿಯಿಂದ ಕಟ್ಟಿ ಹಾಕಲಾಗಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ವೃದ್ಧಾಶ್ರಮದ ಆಡಳಿತ ಮಂಡಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವೃದ್ಧಾಶ್ರಮದಲ್ಲಿ ಕೆಲವರನ್ನು ಸರಪಳಿಯಿಂದ ಕಟ್ಟಿ ಹಾಕಲಾಗಿತ್ತು. ಅವರನ್ನು ಅಕ್ರಮವಾಗಿ ಬಂಧಿಸಲಾಗಿದ್ದು, ಅಮಾನವೀಯವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ದೂರು ಬಂದಿತ್ತು.
ಮನೆಗೆ ತರಳಿ ತಪಾಸಣೆ ನಡೆಸಲಾಗಿದೆ. ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)