ಹೈದರಾಬಾದ್: ದೇಶಾದ್ಯಂತ ವರುಣನ ಆರ್ಭಟ ಜೋರಾಗಿದೆ. ಭಾರೀ ಮಳೆಯಿಂದಾ ಅನಾಹುತಗಳು ಸೃಷ್ಟಿಯಾಗಿದ್ದು, ಜನ-ಜೀವನ ಹೇಳತೀರದು.ಕೆಲವೆಡೆ ಶಾಲೆ-ಕಚೇರಿಗಳಿಗೂ ಹೋಗದ ಪರಿಸ್ಥಿತಿ ಎದುರಾಗಿದೆ.
ಭಾರೀ ಮಳೆಯಿಂದಾಗಿ ತೆಲಂಗಾಣ ಸರ್ಕಾರ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ತಿಳಿಸಿದ್ದಾರೆ.
ಈ ಬಗ್ಗೆ ಸಚಿವ ಸಂಪುಟ ನಡೆಸಿದ ಮುಖ್ಯಮಂತ್ರಿ ಶಾಲೆಗಳಿಗೆ ರಜೆ ಘೋಷಿಸಲು ಸೂಚನೆ ನೀಡಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ತುರ್ತು ಪರಿಹಾರ ನೀಡಲು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಮಳೆ ಅವಾಂತರದಿಂದ ಸೃಷ್ಟಿಯಾಗಿರುವ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ, ಅಗತ್ಯ ಕ್ರಮ ಕೈಗೊಳ್ಳಲು ಹೇಳಿದ್ದಾರೆ.
ಜಯಶಂಕರ್ಭೂಪಲಪಲ್ಲಿ, ಮಂಚೇರಿಯಲ್,ನಿರ್ಮಲ್, ನಿಜಾಮಾಬಾದ್,ಪೆದ್ದಪಲ್ಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಏಜೆನ್ಸೀಸ್)
ಶೀಘ್ರದಲ್ಲೇ ಕೊನೆಯಾಗಲಿದೆ ವರ್ಕ್ ಫ್ರಂ ಹೋಮ್: ಈ ಬಗ್ಗೆ ಟಿಸಿಎಸ್ ಸಿಇಒ ಗೋಪಿನಾಥನ್ ಹೇಳಿದ್ದೇನು?