ಹೈದರಾಬಾದ್: ಮತಎಣಿಕೆಯ ನಡುವೆಯೇ ತೆಲಂಗಾಣದ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿಯನ್ನು ಭೇಟಿ ಮಾಡಿದ ಉನ್ನತ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.
ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ ಅಂಜನಿ ಕುಮಾರ್ ಮತ್ತು ಇನ್ನಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ವಿವರಣೆ ನೀಡುವಂತೆ ಆಯೋಗ ಕೇಳಿದೆ.
ಮತಎಣಿಕೆಯ ನಡುವೆಯೇ ಅಂಜನಿ ಕುಮಾರ್ ಮತ್ತು ಇತರೆ ಪೊಲೀಸ್ ಅಧಿಕಾರಿಗಳು ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಲು ಹೈದರಾಬಾದ್ನಲ್ಲಿರುವ ಅವರ ನಿವಾಸಕ್ಕೆ ತೆರಳಿದ್ದರು. ರೇವಂತ್ ರೆಡ್ಡಿಗೆ ಅಂಜನಿ ಕುಮಾರ್ ಅವರು ಹೂಗುಚ್ಛ ನೀಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಆಯೋಗ ಕ್ರಮ ಕೈಗೊಂಡಿದೆ.
ಚುನಾವಣಾ ಅಭ್ಯರ್ಥಿಗಳಲ್ಲಿ ಒಬ್ಬರನ್ನು ಭೇಟಿ ಮಾಡಲು ಡಿಜಿಪಿ ಆಯ್ಕೆ ಮಾಡಿಕೊಂಡಿರುವುದು ತಮ್ಮ ಮೇಲೆ ಒಲವು ಕೋರುವ ದುರುದ್ದೇಶದ ಸ್ಪಷ್ಟ ಸೂಚನೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಫಲಿತಾಂಶದ ವಿಚಾರಕ್ಕೆ ಬಂದರೆ, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್)ಗೆ ತೆಲಂಗಾಣ ಮತದಾರರು ಶಾಕ್ ನೀಡಿದ್ದು, ಈ ಬಾರಿ ಕಾಂಗ್ರೆಸ್ ಮೇಲೆ ತಮ್ಮ ಒಲವು ತೋರಿದ್ದಾರೆ. ಅಖಂಡ ಆಂಧ್ರಪ್ರದೇಶದಿಂದ ಇಬ್ಭಾಗವಾಗಿ ಸ್ವತಂತ್ರ ತೆಲಂಗಾಣ ರಾಜ್ಯ ರಚನೆಯಾದಾಗಿನಿಂದ ಕೆ. ಚಂದ್ರಶೇಖರ್ ರಾವ್ ಅವರ ಬಿಆರ್ಎಸ್ ಪಕ್ಷ ಆಡಳಿತದಕಲ್ಲಿತ್ತು. ಎರಡು ದಶಕಗಳ ಆಡಳಿತಕ್ಕೆ ಈ ಬಾರಿ ಬ್ರೇಕ್ ಬಿದ್ದಿದೆ.
ಒಟ್ಟು 119 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 65 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ತೆಲಂಗಾಣದಲ್ಲಿ ಅಧಿಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. ಆಡಳಿತರೂಢ ಬಿಆರ್ಎಸ್ ಕೇವಲ 39 ಸ್ಥಾನಗಳಿಗೆ ಕುಸಿದಿದೆ. ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ. (ಏಜೆನ್ಸೀಸ್)
ಉತ್ತರ ಪ್ರದೇಶದಂತೆ ರಾಜಸ್ಥಾನದಲ್ಲೂ ಮತ್ತೊಬ್ಬ ಯೋಗಿ ಉದಯವಾಗ್ತಾರಾ? ಯಾರು ಈ ಬಾಬಾ ಬಾಲಕನಾಥ್?
ಮಾಲ್ಡೀವ್ಸ್ನಲ್ಲಿ ರಜೆ ಕಳೆದಿದ್ದ ವಿಜಯ್ -ರಶ್ಮಿಕಾ ಫೋಟೋಗಳ ಸಾರ್ವಜನಿಕ ಪ್ರದರ್ಶನ?: ನಟಿ ಮೃಣಾಲ್ ಶಾಕ್ ಆಗಿದ್ದೇಕೆ?