ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮನಾದ ನಾಯಕ ಕಾಂಗ್ರೆಸ್ನಲ್ಲಿ ಯಾರಿದ್ದಾರೆ ಹೇಳಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಶ್ನಿಸಿದ್ದಾರೆ.
ಸಿಂದಗಿಯಲ್ಲಿ ಶನಿವಾರ ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಬಿಎಸ್ವೈ, ಆ ಇಬ್ಬರು ನಾಯಕರು ಮತ್ತೊಮ್ಮೆ ಮೋದಿ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಆ ಕೆಲಸ ಮಾಡ್ತಿದ್ದಾರೆ. ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ ಇರೋದಿಲ್ಲ. ಎಲ್ಲಿದೆಯಪ್ಪಾ ಕಾಂಗ್ರೆಸ್? ನಿಮ್ಮ ನಾಯಕ ಯಾರು? ಎಂದು ಕಾಂಗ್ರೆಸ್ ಪಡೆಯನ್ನು ಅಣಕಿಸಿದರು.
ವಿಜಯಸಂಕಲ್ಪ ಅಭಿಯಾನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮೂಲಕ ಆರಂಭ ಆಗಿರೋದು ನಮ್ಮ ಸೌಭಾಗ್ಯ. ಹಣಬಲ, ತೋಳ್ಬಲದಿಂದ ಅಧಿಕಾರಕ್ಕೆ ಬರೋ ಕಾಲವಿಲ್ಲ, ಇದನ್ನು ಕಾಂಗ್ರೆಸ್ನವರು ಮರೆಯಬೇಕು. ಮೋದಿಜಿ ಅವರು ಜೆ.ಪಿ. ನಡ್ಡಾ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ನಾನೇ ಮುಂದಿನ ಮುಖ್ಯಮಂತ್ರಿ ಆಗ್ತೀನಿ ಎಂದು ಕೆಲವರು ತಿರುಕನ ಕನಸು ಕಾಣುತ್ತಿದ್ದಾರೆ. ಮೋದಿ, ನಡ್ಡಾ, ಅಮಿತ್ ಶಾ ಅವರ ನೇನೃತ್ವದಲ್ಲಿ 140ಕ್ಕೂ ಸ್ಥಾನ ಗೆದ್ದು ಮತ್ತೊಮ್ಮೆ ಬಿಜೆಪಿಯನ್ನ ರಾಜ್ಯದಲ್ಲಿ ಅಧಿಕಾರಕ್ಕೆ ತರುತ್ತೇವೆ. ದೇಶದಲ್ಲಿ ಬಿಜೆಪಿ ಗಾಳಿ ಬೀಸುತ್ತಿದೆ ಎಂದರು.
ಜೆ.ಪಿ. ನಡ್ಡಾ ಅವರು ಇಂದು ಕರ್ನಾಟಕಕ್ಕೆ ಬಂದು ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. ಪ್ರತಿಯೊಬ್ಬ ಕಾರ್ಯಕರ್ತರೂ ಮನೆಮನೆಗೆ ಹೋಗಿ ಬಿಜೆಪಿಯ ಸಾಧನೆ-ಕಾರ್ಯಗಳನ್ನು ತಿಳಿಸಬೇಕು. ಮಹಿಳಾ ಸಬಲೀಕರಣದ ಬಗ್ಗೆ ತಿಳಿ ಹೇಳಬೇಕಿದೆ ಎಂದು ಕಾರ್ಯಕರ್ತರಿಗೆ ಬಿಎಸ್ವೈ ಕರೆ ನೀಡಿದರು.
ಯಂಕಾ, ನಾಣಿ, ಸೀಣಿ ಅಂತ ಅಲ್ಲೊಬ್ಬ ಇಲ್ಲೊಬ್ಬ ಬಿಟ್ಟರೆ ಕಾಂಗ್ರೆಸ್ನಲ್ಲಿ ಯಾರಿದ್ದಾರೆ. ಮೋದಿ ಅವರಿಗೆ ಸಮನಾಗಿ ಕಾಂಗ್ರೆಸ್ನಲ್ಲಿ ಯಾವ ನಾಯಕ ಇದ್ದಾರೆ ಹೇಳಲಿ ನೋಡೋಣ? ಎಂದು ಯಡಿಯೂರಪ್ಪ ಸವಾಲು ಹಾಕಿದರು.
ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರು ವಿಜಯಪುರದ ನಾಗಠಾಣಾ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಶ್ರೀ @BSYBJP, ಸಚಿವ @drashwathcn & ಪ್ರಮುಖರೊಂದಿಗೆ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದರು.#VijayaSankalpaAbhiyana #ವಿಜಯಸಂಕಲ್ಪಅಭಿಯಾನ
1/2 pic.twitter.com/auiOEVmH0q— BJP Karnataka (@BJP4Karnataka) January 21, 2023
ಜೆಡಿಎಸ್ ಘೋಷಿತ ಅಭ್ಯರ್ಥಿ ಶಿವಾನಂದ ಪಾಟೀಲ್ ನಿಧನ: ಅಗಲಿದ ನಾಯಕನಿಗೆ ಎಚ್ಡಿಕೆ ಅಂತಿಮ ನಮನ