ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಬಗ್ಗೆ ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ತೆಲುಗು ನಟನ ವಿರುದ್ಧ ಸ್ಯಾಂಡಲ್ವುಡ್ ತಿರುಗಿ ಬಿದ್ದಿದೆ. ಶುಕ್ರವಾರವಷ್ಟೇ ನಟ ಹಾಗೂ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಜತ್ಕರ್, ವಿಜಯ್ ರಂಗರಾಜು ಹೇಳಿಕೆ ಹಿಂಪಡೆಯುವಂತೆ ಎಚ್ಚರಿಕೆ ನೀಡಿದ್ದರು. ಇದೀಗ ಕನ್ನಡದ ಸ್ಟಾರ್ ನಟರು, ಆ ನಟನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸಮರ ಸಾರಿದ್ದಾರೆ.
ಜಗ್ಗೇಶ್, ಕಿಚ್ಚ ಸುದೀಪ್, ಪುನೀತ್ ರಾಜಕುಮಾರ್, ಗಣೇಶ್ ಸೇರಿ ಹಲವು ಘಟಾನುಘಟಿ ಕಲಾವಿದರು ತೆಲುಗು ನಟನಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡಿಕೊಂಡಿರುವ ಸುದೀಪ್, ‘ವಿಷ್ಣು ಅವರು ಇಲ್ಲ ಎಂದ ಮಾತ್ರಕ್ಕೆ ಹೀಗೆಲ್ಲ ಮಾತನಾಡುವುದು ಸರಿಯಲ್ಲ. ಆ ವ್ಯಕ್ತಿ ಬದುಕಿದ್ದಾಗ ಮಾತನಾಡಿದ್ದರೆ ಗಂಡಸ್ತನ ಇರುತ್ತಿತ್ತು. ಸಿನಿಮಾ ಕ್ಷೇತ್ರ ಅಂದರೆ ಒಂದು ಕುಟುಂಬದ ರೀತಿ. ನಿಮ್ಮ ಈ ಮಾತನ್ನು ನಿಮ್ಮ ಚಿತ್ರರಂಗದಲ್ಲೇ ಯಾರೂ ಒಪ್ಪುವುದಿಲ್ಲ. ನಾಡಿನ ಜನರ ಆರಾಧ್ಯ ದೈವವಾಗಿರುವ ವಿಷ್ಣುವರ್ಧನ್ ನಮ್ಮ ನಡುವೆ ಇಲ್ಲದೆ ಇರಬಹುದು. ಕೋಟಿ ಕೋಟಿ ಮಕ್ಕಳನ್ನು ಬಿಟ್ಟು ಹೋಗಿದ್ದಾರೆ. ಇಲ್ಲಿ ಯಾರೂ ಸುಮ್ಮನೆ ಕುಳಿತಿಲ್ಲ’ ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ರಾಮಾಂಜನೇಯ ಅವತಾರದಲ್ಲಿ ದರ್ಶನ್, ಸುದೀಪ್; ಕರಣ್ ಕುಂಚದಲ್ಲಿ ಕಮಾಲ್
ಅದೇ ರೀತಿ ಪುನೀತ್ ರಾಜಕುಮಾರ್ ಸಹ ಪ್ರತಿಕ್ರಿಯಿಸಿದ್ದು, ‘ನಮ್ಮ ನಾಡಿನ ಮೇರು ನಟರಲ್ಲಿ ಒಬ್ಬರಾದ ವಿಷ್ಣು ಸರ್ ಬಗ್ಗೆ ಅವಹೇಳನವಾಗಿ ಮಾತನಾಡಿರುವ ಆ ಕಲಾವಿದ ಕ್ಷಮೆ ಕೇಳಿ ತನ್ನ ಮಾತುಗಳನ್ನ ಹಿಂಪಡೆಯಬೇಕು. ಭಾರತೀಯ ಚಿತ್ರರಂಗ ನಮ್ಮ ಮನೆ. ಎಲ್ಲ ಕಲಾವಿದರು ಒಂದು ಕುಟುಂಬ. ಕಲೆಗೆ, ಕಲಾವಿದರಿಗೆ ಗೌರವಿಸೋದು ನಮ್ಮ ಕರ್ತವ್ಯ. ಒಬ್ಬ ಕಲಾವಿದನಾಗಬೇಕಾದರೆ ಅವನಿಗಿರಬೇಕಾದ ಮೊದಲ ಅರ್ಹತೆ ತನ್ನ ಸಹದ್ಯೋಗಿ ಕಲಾವಿದರ ಬಗ್ಗೆ ಗೌರವ ಹಾಗೂ ಪ್ರೀತಿಯನ್ನು ತೋರುವುದು. ಯಾವುದೇ ಭಾಷೆಯ ನಟರಾದರು ಮೊದಲು ಗೌರವ ನೀಡಬೇಕು’ ಎಂದಿದ್ದಾರೆ.
ವಿಜಯ್ ರಂಗರಾಜುಗೆ @KicchaSudeep sir ಅವರ ಖಡಕ್ ವಾರ್ನಿಂಗ್ ಇಲ್ಲಿದೆ.
ಒಬ್ಬ ಸ್ಟಾರ್ ಸ್ಥಾನದಲ್ಲಲ್ಲದೆ ಒಬ್ಬ ಫ್ಯಾನ್ ಸ್ಥಾನದಲ್ಲಿ ನಿಂತು ಘರ್ಜಿಸಿದ್ದಾರೆ..Thank u sir..@DrVssOfficial @TV9Telugu @Telugu360 @telugufilmnagar @pavithrabgowda @publictvnews @KicchafansKKSFA @ssparishattu pic.twitter.com/4SsguFB977
— Veerakaputra Srinivasa (@VeerakaputraSri) December 12, 2020
ನತದೃಷ್ಟ ಶಿಕಾಮಣಿ!
ಕಾಲವಾದ ಸಾಧಕರ ಬಗ್ಗೆ ಕುಚೇಷ್ಟೆ ಮಾತಾಡುವ ಗುಣದವ
ಎಲ್ಲಿಯು ಸಲ್ಲದವ!
ಅದರಲ್ಲು ಇವ ಕಲಾವಿದನಂತೆ
ಈದರಿದ್ರ ಮುಖ ಯಾವಚಿತ್ರದಲ್ಲು ನೋಡಿದನೆನಪಿಲ್ಲಾ!ಕನ್ನಡದ ಹೃದಯಗಳೆ ಇವನ ಅನಿಷ್ಟ ಸೊಲ್ಲು ಅಡುಗುವಂತೆ ಕನ್ನಡಿಗರ ದೂಷಣೆಗೆ ಹಿಂಜರಿಯುವಂತೆ ಉತ್ತರಿಸಿ!
ಇವನ ಉದ್ದಟತನ ಮಾತಿಗೆ ಕ್ಷಮೆಯಿಲ್ಲಾ!
ಸತ್ತವರು ದೇವರಸಮ!ದುಃಖವಾಯಿತು! pic.twitter.com/3eu2mJRAki— ನವರಸನಾಯಕ ಜಗ್ಗೇಶ್ (@Jaggesh2) December 10, 2020
Defaming one our senior most artist Dr.Vishnuvardhan was uncalled for.We want the concerned person to provide an unconditional apology for his act.
The entire film industry stands united respecting art and an artist's contribution
Let us be human first #RespectArtAndArtist— Puneeth Rajkumar (@PuneethRajkumar) December 12, 2020
#Vishnuvardhan #Vishnudada pic.twitter.com/tM7z1VdnTX
— Ganesh (@Official_Ganesh) December 12, 2020
‘ವಿಜಯ್ ರಂಗರಾಜು, ಈತ ಕಾಲವಾದ ಸಾಧಕರ ಬಗ್ಗೆ ಕುಚೇಷ್ಟೆ ಮಾತಾಡುವ ಗುಣದವ. ನತದೃಷ್ಟ ಶಿಕಾಮಣಿ. ಎಲ್ಲಿಯೂ ಸಲ್ಲದವ. ಅದರಲ್ಲೂ ಈತ ಕಲಾವಿದನಂತೆ. ಈ ದರಿದ್ರ ಮುಖ ಯಾವ ಚಿತ್ರದಲ್ಲೂ ನೋಡಿದ ನೆನಪ್ಲಿ! ಕನ್ನಡದ ಹೃದಯಗಳೇ ಇವನ ಅನಿಷ್ಟ ಸೊಲ್ಲು ಅಡುಗುವಂತೆ, ಕನ್ನಡಿಗರ ದೂಷಣೆಗೆ ಹಿಂಜರಿಯುವಂತೆ ಉತ್ತರಿಸಿ. ಇವನ ಉದ್ದಟತನದ ಮಾತಿಗೆ ಕ್ಷಮೆಯಿಲ್ಲ. ಸತ್ತವರು ದೇವರಸಮ. ದುಃಖವಾಯಿತು’ ಎಂದು ಜಗ್ಗೇಶ್ ತರಾಟೆ ತೆಗೆದುಕೊಂಡರೆ, ‘ಗೋಲ್ಡನ್ ಸ್ಟಾರ್’ ಗಣೇಶ್ ಸಹ ಮಾತನಾಡಿದ್ದಾರೆ.
ಇದನ್ನೂ ಓದಿ: ‘ಮಾರಿ ಗೋಲ್ಡ್’ ಚಿತ್ರದ ಚಿತ್ರೀಕರಣ ಮುಗೀತು …
‘ಕನ್ನಡದ ಮೇರು ನಟರಾದ ನಮ್ಮ ವಿಷ್ಣು ದಾದಾ ಬಗ್ಗೆ ಈ ರೀತಿ ಮಾತನಾಡುವುದು ಅತ್ಯಂತ ಅಕ್ಷಮ್ಯ ಹಾಗೂ ನಾನಿದನ್ನು ಖಂಡಿಸುತ್ತೇನೆ. ಕಲೆ ಮತ್ತು ಕಲಾವಿದನಿಗೆ ಗಡಿ ರೇಖೆಗಳಿಲ್ಲ. ಯಾವುದೇ ಸಿನಿಮಾರಂಗಕ್ಕೆ ಸಂಬಂಧಿಸಿದ ಕಲಾವಿದನಾದರೂ, ಮತ್ತೊಂದು ಸಿನಿಮಾರಂಗದ ಕಲಾವಿದರೊಡನೆ ಪರಸ್ಪರ ಅಭಿಮಾನ, ಗೌರವ ವಿನಿಮಯ ಮಾಡಿಕೊಳ್ಳುವ ಮೂಲಕ ಸೌಹಾರ್ದತೆ ಕಾಪಾಡಬೇಕು. ಅದನ್ನು ವಿಷ್ಣುದಾದಾ ಹಿಂದಿನಿಂದ ಪಾಲಿಸುತ್ತ ಬಂದಿದ್ದಾರೆ. ಈ ನಿಮ್ಮ ಕೀಳು ಹೇಳಿಕೆ ಅವರನ್ನು ಪೂಜಿಸುವ ಅಭಿಮಾನಿ ಮನಸ್ಸುಗಳಿಗೆ ನೋವಾಗಿದೆ. ಕೂಡಲೇ ಕ್ಷಮೆಯಾಚಿಸಿ’ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ ಗಣೇಶ್.
ಚಿತ್ರಾ ಸಾವಿನ ಹಿಂದೆ ರಾಜಕಾರಣಿಯ ಹೆಸರು? ಹೋಟೆಲ್ಗೂ ಭೇಟಿ ನೀಡಿದ್ದರಂತೆ ಸಚಿವರು!