ಭೋಪಾಲ್: ಆಘಾತಕಾರಿ ಘಟನೆ ಒಂದರಲ್ಲಿ ದೇವಸ್ಥಾನದ ಅರ್ಚಕರೊಬ್ಬರು ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ.
ಕೃತ್ಯ ಎಸಗಿದ ಆರೋಪಿಯನ್ನು ಸಂತೋಷ್ ಶರ್ಮಾ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಪೋಕ್ಸೋ ಸೇರಿದಂತೆ ಭಾರತ ದಂಡ ಸಂಹಿತೆಯ ವಿವಿಧ ಕಾನೂನುಗಳಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು, ಆತನನ್ನು ಪತ್ತೆ ಹಚ್ಚಲು ತಂಡ ಒಂದನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಬಾಲಕಿಯನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ಧಾರೆ.
ಇದನ್ನೂ ಓದಿ: Twitter vs Threads; ಥ್ರೆಡ್ಸ್ನಲ್ಲಿ ಒಮ್ಮೆ ಲಾಗಿನ್ ಮಾಡಿದರೆ ಡಿಲೀಟ್ ಮಾಡುವುದು ಅಸಾಧ್ಯ