ರಾಮನಗರ: ರಾಜ್ಯದಲ್ಲಿ ವಾಹನಗಳು ಪಲ್ಟಿ ಆಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಕೆಲವೇ ಗಂಟೆಗಳ ಮೊದಲು ಮದ್ಯ ತುಂಬಿದ್ದ ವಾಹನ ಪಲ್ಟಿ ಆದ ಬೆನ್ನಿಗೇ ಇದೀಗ ಗ್ಯಾಸ್ ಸಿಲಿಂಡರ್ಗಳನ್ನು ತುಂಬಿದ್ದ ಟೆಂಪೋ ಪಲ್ಟಿ ಆಗಿದೆ. ದುರಂತವೆಂದರೆ ಸಿಲಿಂಡರ್ ಬೈಕ್ ಸವಾರನ ಮೇಲೆ ಬಿದ್ದು ಆತ ಗಂಭೀರವಾಗಿ ಗಾಯಗೊಂಡಿದ್ದಾನೆ.
ರಾಮನಗರ ತಾಲೂಕಿನ ಪಾದರಹಳ್ಳಿ ಗ್ರಾಮದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ಗಳನ್ನು ತುಂಬಿಕೊಂಡು ಹೊರಟಿದ್ದ ಈ ಟೆಂಪೋ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೇ ಸಂದರ್ಭದಲ್ಲಿ ಸಾಗುತ್ತಿದ್ದ ಬೈಕ್ ಮೇಲೂ ಸಿಲಿಂಡರ್ ಬಿದ್ದಿದ್ದು, ಸವಾರ ಮಂಜುನಾಥ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.
ಮಾಗಡಿಯಿಂದ ರಾಮನಗರಕ್ಕೆ ಸಾಗುತ್ತಿದ್ದ ಈ ವಾಹನದಲ್ಲಿ ಸುಮಾರು 50 ಭಾರತ್ ಗ್ಯಾಸ್ ಸಿಲಿಂಡರ್ಗಳಿದ್ದು, ಭಾರಿ ಅನಾಹುತವೊಂದು ತಪ್ಪಿಹೋಗಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರೆ ಭೀಕರ ಅಗ್ನಿದುರಂತ ಸಂಭಿಸುವ ಸಾಧ್ಯತೆ ಇತ್ತು. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದು ಬರೀ ಹೆದ್ದಾರಿಯಲ್ಲ, ‘ಮದ್ಯ’ರಸ್ತೆ: ಆಲ್ಕೋಹಾಲ್ಗಾಗಿ ಮುಗಿಬಿದ್ದ ಪಾನಪ್ರಿಯರು..