ಬೆಂಗಳೂರು: ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದಲ್ಲಿ ಯೋಜಿತ ಕಾಮಗಾರಿ ಆರಂಭವಾಗುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಹಸಿರು ಮಾರ್ಗದ ಪೀಣ್ಯ-ನಾಗಸಂದ್ರ ನಿಲ್ದಾಣಗಳ ನಡುವೆ ಜ.26 ರಿಂದ ಮೂರು ದಿನಗಳ ಕಾಲ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಈ ದಿನಗಳಲ್ಲಿ ಪೀಣ್ಯದಿಂದ ರೇಷ್ಮೆ ಸಂಸ್ಥೆ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ. ಜ.29ರಿಂದ ಎಂದಿನಂತೆ ಬೆಳಗ್ಗೆ 5 ಗಂಟೆಯಿಂದ ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಸೇವೆಗಳು ಇರಲಿವೆ.
ತಾತ್ಕಾಲಿಕವಾಗಿ ರೈಲು ಸೇವೆ ಸ್ಥಗಿತದಿಂದ ಪೀಣ್ಯ ಇಂಡಸ್ಟ್ರಿ ಮತ್ತು ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ ಟಿಕೆಟ್ ಖರೀದಿ ಸಮಯ ಉಳಿಸಲು ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ ಟಿಕೆಟ್, ಕ್ಯೂಆರ್ ಕೋಡ್ ಟಿಕೆಟ್ ಸೇರಿದಂತೆ ಡಿಜಿಟಲ್ ಟಿಕೆಟ್ ಸೌಲಭ್ಯವನ್ನು ಬಳಸಬಹುದು ಎಂದು ಬಿಎಂಆರ್ಸಿಎಲ್ ಹೇಳಿದೆ.