More

    ಇನ್ನಿಬ್ಬರು ಉಗ್ರ ಬರಹಗಾರರು ವಶಕ್ಕೆ?

    ಮಂಗಳೂರು: ನಗರದಲ್ಲಿ ಉಗ್ರ ಸಂಘಟನೆ ಪರ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದು ಕರೆ ತಂದಿರುವ ಮಾಹಿತಿ ಲಭ್ಯವಾಗಿದೆ.
    ಗುರುವಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಫುಡ್ ಡೆಲಿವರಿ ಮಾಡುತ್ತಿದ್ದ ಮಾಝ್ ಅಹ್ಮದ್ (21) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು. ಆತ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಇನ್ನಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಒಟ್ಟು ಮೂವರನ್ನು ವಶಕ್ಕೆ ಪಡೆದಂತಾಗಿದೆ.
    ನ.27ರಂದು ಸರ್ಕ್ಯೂಟ್ ಹೌಸ್‌ನಿಂದ ಬಿಜೈ ಕಡೆಗೆ ಹೋಗುವ ರಸ್ತೆಯಲ್ಲಿ ಕದ್ರಿ ಕಂಬಳ ಕ್ರಾಸ್‌ನಲ್ಲಿರುವ ಅಪಾರ್ಟ್‌ಮೆಂಟ್ ವೊಂದರ ಆವರಣ ಗೋಡೆಯಲ್ಲಿ ಹಾಗೂ 29ರಂದು ಮಂಗಳೂರು ನ್ಯಾಯಾಲಯ ಆವರಣದಲ್ಲಿರುವ ಪೊಲೀಸ್ ಹೊರ ಠಾಣೆಯ ಹಳೇ ಕಟ್ಟಡದ ಗೋಡೆಯಲ್ಲಿ ಉರ್ದು ಭಾಷೆಯಲ್ಲಿ ದೇಶದ್ರೋಹಿ ಬರಹ ಕಾಣಿಸಿಕೊಂಡಿತ್ತು. ಎರಡು ಪ್ರಕರಣಗಳಿಗೆ ಸಂಬಂಧಿಸಿ ಕದ್ರಿ ಹಾಗೂ ಬಂದರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ನಾಲ್ಕು ವಿಶೇಷ ಪೊಲೀಸ್ ತಂಡಗಳು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿವೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಗಳ ವಿಚಾರಣೆ ನಡೆಯುತ್ತಿದೆ.

    ಯಾರನ್ನೂ ಬಂಧಿಸಿಲ್ಲ: ದೇಶದ್ರೋಹಿ ಬರಹ ಪ್ರಕರಣಕ್ಕೆ ಸಂಬಂಧಿಸಿ ಯಾರನ್ನೂ ಬಂಧಿಸಿಲ್ಲ. ನಾಲ್ಕು ತಂಡಗಳಿಂದ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts