ಕಲಬುರಗಿ: ಉಗ್ರರು ನಡೆಸಿದ ಗುಂಡಿನ ದಾಳಿಗೆ ಕರ್ನಾಟಕ ಮೂಲದ ಓರ್ವ ಬಿಎಸ್ಎಫ್ ಯೋಧ ಹುತಾತ್ಮರಾಗಿರುವ ಘಟನೆ ಭಾರತ-ಬಾಂಗ್ಲಾ ಗಡಿಯಲ್ಲಿರುವ ಧಲಾಯಿ ಪ್ರದೇಶದಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಚಿಂಚನಸೂರ ಗ್ರಾಮದ ಯೋಧ ರಾಜಕುಮಾರ ಎಂ. ಮಾವಿನ್ ಹುತಾತ್ಮರಾಗಿದ್ದಾರೆ. ತ್ರಿಪುರಾ ರಾಜ್ಯದ ಭಾರತ-ಬಾಂಗ್ಲಾ ಗಡಿಯಲ್ಲಿರುವ ಧಲಾಯಿ ಪ್ರದೇಶದಲ್ಲಿ ಯೋಧರು ಗಸ್ತು ತಿರುಗುತ್ತಿರುವಾಗ ಉಗ್ರರಿಂದ ಏಕಾಏಕಿ ಗುಂಡಿನ ದಾಳಿ ನಡೆದಿದೆ.
ಇದನ್ನೂ ಓದಿ: 80 ವರ್ಷದ ವೃದ್ಧೆ ಮೇಲೆ ಸಂಬಂಧಿಕನಿಂದಲೇ ನೀಚ ಕೃತ್ಯ
ಈ ವೇಳೆ ಯೋಧ ರಾಜಕುಮಾರ ಎದೆಗೆ ಗುಂಡು ತಗುಲಿ ಗಂಭೀರ ಗಾಯಗೊಂಡು ನಂತರ ಹುತಾತ್ಮರಾಗಿದ್ದಾರೆ. ಯೋಧ ರಾಜಕುಮಾರ ಹುಟ್ಟೂರು ಚಿಂಚನಸೂರು ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುವಾರ ಸ್ವಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ಆಗಮಿಸುವ ಸಾಧ್ಯತೆ ಇದೆ.