ನವದೆಹಲಿ: ಗೃಹ ಸಚಿವ ಅಮಿತ್ ಷಾ ಅವರು ಕರೊನಾ ಸೋಂಕಿಗೆ ಒಳಗಾಗಿದ್ದು, ಗುರ್ಗಾಂವ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಆದರೆ ಈ ವಿಚಾರದ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಶಶಿ ತರೂರ್, ಅಮಿತ್ ಷಾ ಅವರಲ್ಲಿ ಭಾನುವಾರ ಕೊವಿಡ್-19 ಸೋಂಕು ದೃಢಪಟ್ಟಿದೆ. ಆದರೆ ಅವರು ದೆಹಲಿಯ ಏಮ್ಸ್ಗೆ ದಾಖಲಾಗುವ ಬದಲು ನೆರೆ ರಾಜ್ಯದ ಖಾಸಗಿ ಆಸ್ಪತ್ರೆಯನ್ನೇಕೆ ಆಯ್ಕೆ ಮಾಡಿಕೊಂಡಿದ್ದಾರೆ? ಈ ಬಗ್ಗೆ ತುಂಬ ಆಶ್ಚರ್ಯವಾಗುತ್ತಿದೆ ಎಂದು ಹೇಳಿದ್ದಾರೆ. ಹಾಗೇ, ಸಾರ್ವಜನಿಕ ಸಂಸ್ಥೆಗಳು ಸಾಮಾನ್ಯ ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದರೆ ಅವುಗಳಿಗೆ ಪ್ರಬಲರ ಪ್ರೋತ್ಸಾಹವೂ ಬೇಕು ಎಂದು ಶಶಿ ತರೂರ್ ಟ್ವೀಟ್ ನಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಹೇಗಿದೆ ಗೊತ್ತಾ ರಾಮಮಂದಿರ ಭೂಮಿ ಪೂಜೆಯ ಆಮಂತ್ರಣ ಪತ್ರಿಕೆ? ಮೊದಲ ಇನ್ವಿಟೇಶನ್ ಕಾರ್ಡ್ ಹೋಗಿದ್ದು ಯಾರಿಗೆ?
ಗೃಹ ಸಚಿವ ಅಮಿತ್ ಷಾ ಅವರು ಭಾನುವಾರ ಟ್ವೀಟ್ ಮಾಡಿ ತಮಗೆ ಕರೊನಾ ಸೋಂಕು ತಗುಲಿದ್ದಾಗಿ ಹೇಳಿದ್ದರು. ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದೂ ತಿಳಿಸಿದ್ದರು. (ಏಜೆನ್ಸೀಸ್)
ಒಂದು ಕಪ್ ಟೀಗೆ ₹100: ಮೋದಿಗೆ ಹೋಯಿತೊಂದು ಮೇಲ್- ಮುಂದೆ ನಡೆದದ್ದೆಲ್ಲ ಅಚ್ಚರಿಯೋ ಅಚ್ಚರಿ!