ಬೆಂಗಳೂರು: 1,400 ಕೋಟಿ ರೂ. ಅವ್ಯವಹಾರ ಆರೋಪ ಸಂಬಂಧ ಗುರುರಾಘವೇಂದ್ರ ಕೋ-ಆಪರೇಟಿವ್ ಸೊಸೈಟಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಸವನಗುಡಿಯ ನೆಟ್ಟಕಲ್ಲಪ್ಪ ಸರ್ಕಲ್ ಬಳಿ ಇರುವ ಪ್ರಧಾನ ಶಾಖೆ ಸೇರಿ ನಗರದಲ್ಲಿರುವ 3 ಶಾಖೆಗಳ ಮೇಲೆ ಗುರುವಾರ ಬೆಳಗ್ಗೆ ಏಕಕಾಲಕ್ಕೆ ಎಸಿಬಿ ದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಬ್ಯಾಂಕ್ನ ನಿವೃತ್ತ ಸಿಇಒ ವಾಸುದೇವ್ ಮೈಯ್ಯಾ, ಬ್ಯಾಂಕ್ ಅಧ್ಯಕ್ಷ ಡಾ.ಕೆ.ರಾಮಕೃಷ್ಣ ಅವರ ಮನೆ ಮೇಲೂ ದಾಳಿ ದಾಳಿ ನಡೆದಿದೆ. ಇದನ್ನೂ ಓದಿರಿ ಇಂಚರ ಗೋವಿಂದರಾಜುಗೆ ಜೆಡಿಎಸ್ ಟಿಕೆಟ್ ಕೊಟ್ಟಿದ್ದರ ಹಿಂದಿದೆ ಮಾಸ್ಟರ್ ಪ್ಲ್ಯಾನ್…
ಬೆಳ್ಳಬೆಳಗ್ಗೆ ದಾಳಿ ನಡೆಸಿದ ಎಸಿಬಿ ಡಿವೈಎಸ್ಪಿ ತಮ್ಮಯ್ಯ ಮತ್ತು ವಜೀರ್ ಅಲಿ ಖಾನ್ ನೇತೃತ್ವದ ತಂಡ, ಸೊಸೈಟಿಯ ಮುಖ್ಯ ಕಚೇರಿ ಮತ್ತು ಬ್ಯಾಂಕ್ನಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದೆ.
ಗುರುರಾಘವೇಂದ್ರ ಕೋ-ಆಪರೇಟಿವ್ ಸೊಸೈಟಿಯಲ್ಲಿ ಹಣಕಾಸು ಅವ್ಯವಹಾರ ನಡೆದಿದೆ ಎಂಬ ಆರೋಪ ಸಂಬಂಧ ಈಗಾಗಲೇ ಇಡಿ ಕೂಡ ತನಿಖೆ ಆರಂಭಿಸಿದೆ.
ಲೈಂಗಿಕವಾಗಿ ಬಳಸಿಕೊಂಡು ಸಾಲ ಕೊಟ್ಟ, ಆಕೆ ಹಣ ಹಿಂತಿರುಗಿಸಿದರೂ ಮತ್ತೆ ಬರುವಂತೆ ಪೀಡಿಸಿದ…