More

    ಮದುವೆ ನಂತರ ಸ್ಯಾಂಡಲ್​ವುಡ್​ಗೆ ರೀ ಎಂಟ್ರಿ ಕೊಡಲಿದ್ದಾರೆ ಈ ನಟಿ

    ಬೆಂಗಳೂರು: ಬಾಲ ನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟವರು ಅಮೂಲ್ಯ. ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಪೂರ್ಣ ಪ್ರಮಾಣದ ನಟಿಯಾಗಿ ಕಾಣಿಸಿಕೊಂಡಿದ್ದರು. ಬಳಿಕ ಚಂದನವನದಲ್ಲಿ ಬಹುಬೇಡಿಕೆಯ ನಟಿಯಾದರು. ಅವರಿಗೆ ಅಭಿಮಾನಿ ಬಳಗ ದೊಡ್ಡದು.

    ಇದನ್ನೂ ಓದಿ:ರಾಕ್ಷಸ’ ನಾದ ಪ್ರಜ್ವಲ್ ದೇವರಾಜ್​: ಸಿನಿಮಾದ ಫಸ್ಟ್ ಲುಕ್ ರಿಲೀಸ್

    2017ರಲ್ಲಿ ಜಗದೀಶ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಯಾವ ಸಿನಿಮಾದಲ್ಲೂ ಅವರು ಕಾಣಿಸಿಕೊಳ್ಳಲೇ ಇಲ್ಲ. ಮಕ್ಕಳಾದ ಬಳಿಕ ಬಣ್ಣದ ಲೋಕದಿಂದ ದೂರ ಉಳಿದಿದ್ದಾರೆ. ಯಾವುದೇ ಸಿನಿಮಾದಲ್ಲೂ ಕಾಣಿಸಿಕೊಂಡಿಲ್ಲ. ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಇದೀಗ ಅಮೂಲ್ಯ ಮತ್ತೆ ಸಿನಿಮಾ ಮಾಡ್ತಾರೆ ಎಂಬ ಸುಳಿವು ಸಿಕ್ಕಿದೆ.

    ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2024ರ ಟ್ರೋಫಿ ಅನಾವರಣ ಕಾರ್ಯಕ್ರಮದಲ್ಲಿ ಈ ಕುರಿತು ಮಾತನಾಡಿದ ಅಮೂಲ್ಯ, ಈಗಾಗಲೇ ಎರಡು ಸ್ಕ್ರಿಪ್ಟ್ ಕೇಳಿದ್ದೇನೆ. ಕಥೆ ಇಷ್ಟವಾದ ತಕ್ಷಣವೇ ತಿಳಿಸುತ್ತೇನೆ ಎಂದಿದ್ದಾರೆ.

    ಸಿನಿಮಾ ರಂಗಕ್ಕೆ ನಟಿ ಅಮೂಲ್ಯ ಮತ್ತೆ ಮರು ಪ್ರವೇಶ ಮಾಡುತ್ತಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಲೇ ಇತ್ತು. ಖಚಿತ ಮಾಹಿತಿ ಬರಲಿಲ್ಲ. ಇಂದು ಸ್ವತಃ ಅಮೂಲ್ಯ ಅವರೇ ಸಿನಿಮಾ ರಂಗಕ್ಕೆ ಮತ್ತೆ ಬರುವ ಕುರಿತು ಮಾತನಾಡಿದ್ದಾರೆ. ಅಭಿಮಾನಿಗಳಿಗೆ ಈ ಮೂಲಕ ಖುಷಿ ಸುದ್ದಿ ಕೊಟ್ಟಿದ್ದಾರೆ.

    ಬಾಲ್ಯದಿಂದಲೂ ನಾನು ಸಿನಿಮಾ ರಂಗದ ಜೊತೆನೇ ಬೆಳೆದೋಳು. ನನಗೆ ಸಿನಿಮಾ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ. ಸಿನಿಮಾವನ್ನೇ ನಾನು ಮಾಡಬೇಕು. ಮತ್ತೆ ಸಿನಿಮಾ ರಂಗಕ್ಕೆ ಬರ್ತೀನಿ. ಸಿನಿಮಾಗಳನ್ನು ಮಾಡುತ್ತೇನೆ ಎಂದರು ಅಮೂಲ್ಯ.

    ಡೇಂಜರ್​ ಝೋನ್​​ನಲ್ಲಿ ನಟಿ ಶ್ರೀಲೀಲಾ! ಇದೇ ಮುಂದುವರಿದ್ರೆ ಸೌತ್​ ಬ್ಯೂಟಿ ಕತೆ ಅಷ್ಟೇ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts