More

    ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದ ಜಿಲ್ಲಾಧ್ಯಕ್ಷರ ನೇಮಕ

    ಗುಂಡ್ಲುಪೇಟೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಷೇತ್ರದ ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿರುವುದು ಚುನಾವಣಾ ಸೋಲಿನಿಂದ ಕಂಗೆಟ್ಟಿದ್ದ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದೆ.

    ಕಳೆದ ಬಾರಿ ಜಿಲ್ಲೆಯ ಏಕೈಕ ಬಿಜೆಪಿ ಶಾಸಕರಾಗಿದ್ದ ನಿರಂಜನಕುಮಾರ್ ಅವರಿಗೆ ಬಹುತೇಕ ಜಿಲ್ಲೆಯ ಎಲ್ಲ ಕ್ಷೇತ್ರಗಳ ಕಾರ್ಯಕರ್ತರ ಪರಿಚಯವಿದೆ. ಜಿಲ್ಲಾ ಉಸ್ತುವಾರಿ ಸಚಿವರ ಜತೆಗೂಡಿ ಸರ್ಕಾರದ ಎಲ್ಲ ಕಾರ್ಯಕ್ರಮಗಳು ಹಾಗೂ ಸಭೆಗಳಲ್ಲಿ ಭಾಗವಹಿಸಿದ ಅನುಭವವಿದೆ. ಮೊದಲ ಬಾರಿಗೆ ಆಯ್ಕೆ ಆದರೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಹಾಗೂ ಯಡಿಯೂರಪ್ಪ ಅವರ ಕುಟುಂಬಕ್ಕೆ ಆಪ್ತರಾಗಿದ್ದ ಕಾರಣದಿಂದ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ತಮ್ಮದೇ ಆದ ವರ್ಚಸ್ಸು ಗಳಿಸಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಮತಗಳ ಅಂತರದಿಂದ ಸೋತಿದ್ದು ಸ್ವತಃ ನಿರಂಜನಕುಮಾರ್ ಹಾಗೂ ಕಾರ್ಯಕರ್ತರ ಎದೆಗುಂದಿಸಿತ್ತು. ಅಲ್ಲದೆ, ನಿರಂಜನಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಚಿಂತಿಸುವಂತಾಗಿತ್ತು.

    ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ನಿರ್ಲಕ್ಷಿಸಿದ ಪರಿಣಾಮ ಬಿಜೆಪಿಯ ಹೀನಾಯ ಸೋಲು ಕಾರ್ಯಕರ್ತರನ್ನು ಅತಂತ್ರ ಮಾಡಿತ್ತು. ಆದರೆ ರಾಜ್ಯ ಬಿಜೆಪಿಗೆ ವಿಜಯೇಂದ್ರ ನೇಮಕ ಭಾರಿ ಸಂಚಲನ ಮೂಡಿಸಿದ್ದರೂ ಕಾರ್ಯಕರ್ತರು ಜಿಲ್ಲೆಯಲ್ಲಿ ಸಮರ್ಥವಾಗಿ ಪಕ್ಷ ಸಂಘಟನೆ ಮಾಡಬಲ್ಲ ಜಿಲ್ಲಾಧ್ಯಕ್ಷರ ಬಗ್ಗೆ ಕುತೂಹಲ ಹೊಂದಿದ್ದರು. ಬಹುತೇಕ ಕಾರ್ಯಕರ್ತರ ನಿರೀಕ್ಷೆಯಂತೆ ವಿಜಯೇಂದ್ರ ಅವರು ನಿರಂಜನಕುಮಾರ್ ಅವರನ್ನು ಜಿಲ್ಲಾಧ್ಯಕ್ಷರಾಗಿ ನಿಯೋಜಿಸುವ ಮೂಲಕ ಉತ್ಸಾಹ ಮೂಡಿಸಿದ್ದಾರೆ ಎಂದು ಕಾರ್ಯಕರ್ತರು ಸಂತಸ ವ್ಯಕ್ತಪಡಿಸುತ್ತಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts