ಯುವಕನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು

blank

ಮೈಸೂರು: ಹಳೇ ದ್ವೇಷ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಗುಂಪೊಂದು ಯುವಕನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದೆ.
ನಗರದ ಮೇದರಕೇರಿಯ ಕುಮಾರ್ (24) ಚಾಕು ಇರಿತಕ್ಕೆ ಒಳಗಾಗಿ ಸಾವು, ಬದುಕಿನ ನಡುವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನೂರೊಂದು ಗಣಪತಿ ದೇವಸ್ಥಾನ ಬಳಿ ಶನಿವಾರ ರಾತ್ರಿ ಬಂದಿದ್ದ ಕುಮಾರ್‌ನನ್ನು ಹಿಂಬಾಲಿಸಿ ಸ್ಕೂಟರ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ, ಚಾಕುವಿನಿಂದ 3 ರಿಂದ 4 ಬಾರಿ ಇರಿದಿದೆ. ಈ ವೇಳೆ ಕುಮಾರ್ ಕೂಗಾಡಿದಾಗ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕೃಷ್ಣರಾಜ ಪೊಲೀಸರು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಕುಮಾರ್‌ನನ್ನು ಸಾರ್ವಜನಿಕರ ಸಹಾಯದಿಂದ ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ.
ಕುಮಾರ್ ಸ್ಥಿತಿ ಗಂಭೀರವಾಗಿದ್ದು, 24 ಗಂಟೆಗಳ ಕಾಲ ನಿಗಾ ಘಟಕದಲ್ಲಿ ಇರಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೃಷ್ಣರಾಜ ಠಾಣೆ ಪೊಲೀಸರು, ದುಷ್ಕರ್ಮಿಗಳ ಪತ್ತೆ ಕಾರ್ಯ ನಡೆಸಿದ್ದಾರೆ.

Share This Article

ಪುಷ್ಯ ನಕ್ಷತ್ರಕ್ಕೆ ಸೂರ್ಯನ ಎಂಟ್ರಿ! ಈ ತಿಂಗಳು 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Astrology

Astrology : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಜನಿಸಿದ ರಾಶಿಚಕ್ರ ಚಿಹ್ನೆ ಮತ್ತು ನಕ್ಷತ್ರವು ಅವರ…

ಮುಖದ ಸೌಂದರ್ಯಕ್ಕೆ ಐಸ್​​ಕ್ಯೂಬ್.. ಕೂಲ್.. ಕೂಲ್! ಐಸ್‌ಕ್ಯೂಬ್‌ನಿಂದ ಸೌಂದರ್ಯದ ಆರೈಕೆ.. Ice Facial Benefits

Ice Facial Benefits:  ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು  ಮಾರುಕಟ್ಟೆಯಲ್ಲಿ…

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…