ಮಂಡ್ಯ: ಶ್ರೀರಂಗಪಟ್ಟಣ ಸಮೀಪವಿರುವ ಮೂಲಸ್ಥಾವರದ ಹತ್ತಿರ ಜೋರು ಮಳೆ ಗಾಳಿಯಿಂದಾಗಿ ವಿದ್ಯುತ್ ಕೇಬಲ್ ಹಾಳಾಗಿದೆ. ಈ ಹಿನ್ನೆಲೆಯಲ್ಲಿ ಮೇ.15 ಮತ್ತು 16ರಂದು ಮಂಡ್ಯ ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನೀರು ಬಂದ ವೇಳೆ ಶೇಖರಿಸಿಟ್ಟುಕೊಂಡು ಜಲಮಂಡಳಿಯೊಂದಿಗೆ ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.