ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ದೆಹಲಿ ಹೈಕೋರ್ಟ್ ಮಂಗಳವಾರ ಮಧ್ಯರಾತ್ರಿ ವಿಚಾರಣೆ ನಡೆಸಿ ಜನರಿಗೆ ರಕ್ಷಣೆ ಒದಗಿಸುವಂತೆ ಪೊಲೀಸರಿಗೆ ಸೂಚನೆ ನೀಡಿತು.
ಪೌರತ್ವ ಕಾಯ್ದೆ ತಿದ್ದುಪಡಿ ಜಾರಿ ವಿರೋಧಿಸಿ ಕಳೆದ ಭಾನುವಾರ ಜಾಫ್ರಬಾದ್ನಲ್ಲಿ ಆರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಮಂಗಳವಾರ ರಾತ್ರಿ ವೇಳೆಗೆ 13 ಮಂದಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಮಧ್ಯರಾತ್ರಿ ವಿಚಾರಣೆ ನಡೆಸಿ ಗಲಭೆಯಲ್ಲಿ ಗಾಯಗೊಂಡವರಿಗೆ ತಕ್ಷಣ ವೈದ್ಯಕೀಯ ನೆರವು ಒದಗಿಸಿ ಜನರಿಗೆ ರಕ್ಷಣೆ ನೀಡುವಂತೆ ಆದೇಶಿಸಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಮೆಟ್ರೋ ರೈಲು ನಿಲ್ದಾಣಗಳನ್ನು ಬುಧವಾರ ಆರಂಭಿಸಲಾಗಿದೆ ಎಂದು ತಿಳಿದು ಬಂದಿದೆ. (ಏಜೆನ್ಸೀಸ್)
ಈಶಾನ್ಯ ದೆಹಲಿ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ: ಕಂಡಲ್ಲಿ ಗುಂಡಿಕ್ಕಲು ಆದೇಶ