ಹನೂರು: ಎಲ್ಲೇಮಾಳ ಗ್ರಾಮದ ಬಳಿ ಶುಕ್ರವಾರ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಅಂಗಡಿಯತ್ತ ನುಗ್ಗಿದ ಪರಿಣಾಮ ಯುವಕ ಗಾಯಗೊಂಡಿದ್ದಾರೆ.
ತಾಲೂಕಿನ ಕೌದಳ್ಳಿ ಗ್ರಾಮದ ಮಹೇಶ್(30) ಗಾಯಗೊಂಡವರು. ಬೆಳಗ್ಗೆ 9.30ರಲ್ಲಿ ಸಾರಿಗೆ ಬಸ್ ಮಲೆಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆಗೆ ತೆರಳುತ್ತಿತ್ತು. ಎಲ್ಲೇಮಾಳ ಗ್ರಾಮದ ಬಳಿ ಚಾಲಕ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯಲ್ಲಿದ್ದ ಅಂಗಡಿಯತ್ತ ನುಗ್ಗಿದೆ. ಬಸ್ ಮುಂದಿನ ಸೀಟ್ನಲ್ಲಿ ಕುಳಿತಿದ್ದ ಮಹೇಶ್ಗೆ ಕಾಲು ಹಾಗೂ ಹೊಟ್ಟೆ ಭಾಗಕ್ಕೆ ತೀವ್ರ ಪೆಟ್ಟಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹನೂರು ಪೊಲೀಸರು ಪರಿಶೀಲಿಸಿದರು. ಗಾಯಾಳುವನ್ನು ತುರ್ತು ವಾಹನದಲ್ಲಿ ಕೊಳ್ಳೇಗಾಲದ ಸರ್ಕಾರಿ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.