ಹುತಾತ್ಮ ಯೋಧ ಹನುಮಂತರಾವ್ ಸಂಪೂರ್ಣ ಕುಟುಂಬವೇ ದೇಶ ಸೇವೆಗೆ ಸಮರ್ಪಣೆ

ಬೆಳಗಾವಿ: ಮಧ್ಯಪ್ರದೇಶದ ಮೊರೆನಾದಲ್ಲಿ ಭಾರತೀಯ ಯುದ್ಧ ವಿಮಾನಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಹುತಾತ್ಮರಾಗಿದ್ದಾರೆ. ದೆಹಲಿಯಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಅವರ ಮೃತದೇಹ ಆಗಮಿಸಲಿದ್ದು, ಬಳಿಕ ಬೆನಕನಹಳ್ಳಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಹುತಾತ್ಮ ವೀರ ಯೋಧ ಹನುಮಂತರಾವ್ ಅವರ ಇಡೀ ಕುಟುಂಬವೇ ದೇಶ ಸೇವೆಗೆ ಸಮರ್ಪಣೆ ಮಾಡಿಕೊಂಡಿದೆ. ಪಠಾಣಕೋಟ್ ಏರ್​ಬೇಸ್​ನಲ್ಲಿದ್ದ ಹನುಮಂತರಾವ್, ಪಾಕಿಸ್ತಾನ ವಿರುದ್ಧದ ಸರ್ಜಿಕಲ್ ಸ್ಟ್ರೈಕ್ ವೇಳೆ ರಿಜರ್ವ್ ಟೀಮ್​ನಲ್ಲಿದ್ದರು. ಅವರ ತಂದೆ ರೇವಣ್ಣ ಸಿದ್ಧಪ್ಪ … Continue reading ಹುತಾತ್ಮ ಯೋಧ ಹನುಮಂತರಾವ್ ಸಂಪೂರ್ಣ ಕುಟುಂಬವೇ ದೇಶ ಸೇವೆಗೆ ಸಮರ್ಪಣೆ