More

    ಮೂರನೇ ದಿನಕ್ಕೆ ಕಾಲಿಟ್ಟ ರೈತರ ಧರಣಿ

    ಗುಂಡ್ಲುಪೇಟೆ: ಕೃಷಿ ಪಂಪ್‌ಸೆಟ್‌ಗಳಿಗೆ ಕನಿಷ್ಠ 8 ಗಂಟೆ ವಿದ್ಯುತ್ ಸರಬರಾಜಿಗೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ ಎರಡನೇ ದಿನ ಪೂರೈಸಿದೆ.

    ರೈತ ಸಂಘದ ತಾಲೂಕು ಅಧ್ಯಕ್ಷ ದಿಲೀಪ್ ನೇತೃತ್ವದಲ್ಲಿ ಕಾರ್ಯಕರ್ತರು ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ಮುಂದುವರಿಸಿದ್ದಾರೆ.
    ಸ್ಥಳಕ್ಕೆ ತಮ್ಮ ಜಾನುವಾರುಗಳೊಂದಿಗೆ ಆಗಮಿಸಿರುವ ಕಾರ್ಯಕರ್ತರು ವಿದ್ಯುತ್ ಕೊರತೆಯಿಂದ ಬೆಳೆಗಳು ಹಾಳಾಗುತ್ತಿವೆ. ಈ ಬಗ್ಗೆ ಎಷ್ಟು ಬಾರಿ ಮನವಿ ಮಾಡಿದರೂ ಸರ್ಕಾರ, ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಸ್ಥಳಕ್ಕೆ ಬಂದು ಮನವಿಯನ್ನೂ ಆಲಿಸುತ್ತಿಲ್ಲ. ಆದ್ದರಿಂದ 8 ಗಂಟೆ ವಿದ್ಯುತ್ ಪೂರೈಸುವವರೆಗೂ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರಿಸುವುದಾಗಿ ಪಟ್ಟುಹಿಡಿದಿದ್ದಾರೆ. ಸ್ಥಳದಲ್ಲಿಯೇ ಆಹಾರ ತಯಾರಿಸಿ ಊಟ ಮಾಡಿ ಮೊಕ್ಕಾಂ ಹೂಡಿದ್ದಾರೆ. ಪ್ರತಿಭಟನೆಯಲ್ಲಿ ಮುಖಂಡರಾದ ಟಿ.ಎಸ್.ಶಾಂತಮಲ್ಲಪ್ಪ, ಶಿವಮಲ್ಲು, ಸಿದ್ದಶೆಟ್ಟಿ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts