ವಿಜೃಂಭಣೆಯ ಮಂಟೇಸ್ವಾಮಿ ಉತ್ಸವ

blank

ಗುಂಡ್ಲುಪೇಟೆ: ತಾಲೂಕಿನ ಕೋಟೆಕೆರೆ ಗ್ರಾಮದಲ್ಲಿ ಧರೆಗೆ ದೊಡ್ಡವರು ಮಂಟೇಸ್ವಾಮಿ ಜಾತ್ರೆ ವಿಜೃಂಭಣೆಯಿಂದ ನೆರವೇರಿತು.

blank

ಮಂಟೇಸ್ವಾಮಿ ಗದ್ದಿಗೆ ಉತ್ಸವದ ಅಂಗವಾಗಿ ಗ್ರಾಮದ ರಸ್ತೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ಉತ್ಸವ ಸಾಗುವ ಮಾರ್ಗದಕ್ಕೂ ರಸ್ತೆಗೆ ನೀರು ಹಾಕಿ ರಂಗೋಲಿ ಚಿತ್ತಾರ ಬಿಡಿಸಲಾಗಿತ್ತು. ರಸ್ತೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಸುತ್ತಮುತ್ತ 33ಕ್ಕೂ ಹೆಚ್ಚು ಗ್ರಾಮಗಳ ಗ್ರಾಮಸ್ಥರು ಮಂಟೇಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು.

ಗ್ರಾಮದ ಭಕ್ತರು ಅಲತ್ತೂರು ಗ್ರಾಮದಿಂದ ಮಂಟೇಸ್ವಾಮಿ ಗದ್ದುಗೆಯನ್ನು ತಂದು ವಿವಿಧ ಹೂಗಳಿಂದ ಅಲಂಕರಿಸಿ ಛತ್ರಿ ಚಾಮರ ವಾದ್ಯ ಮೇಳಗಳ ಸಮೇತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ನಂತರ ಮಂಟೇಸ್ವಾಮಿ ಗದ್ದಿಗೆಯನ್ನು ಆಲತ್ತೂರು ಗ್ರಾಮಕ್ಕೆ ತಲುಪಿಸಿದರು.

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank