More

    ಮದುವೆ ಸಮಾರಂಭದಲ್ಲಿ ತನ್ನದೇ ಬಂದೂಕಿಗೆ ಬಲಿಯಾದ ಸೈನಿಕ! ಮದುಮಗನ ವಿರುದ್ಧ ದೂರು ದಾಖಲು

    ಲಖನೌ: ಉತ್ತರ ಭಾರತೀಯರು ಮದುವೆ ಸಮಾರಂಭದಲ್ಲಿ ಸಂಭ್ರಮಾಚರಣೆಗಾಗಿ ಬಂದೂಕಿನಿಂದ ಗುಂಡು ಹಾರಿಸುವುದು ಸಾಮಾನ್ಯವಾಗಿದೆ. ಆದರೆ ಇಂತಹ ಆಚರಣೆಗಳು ಕೆಲವೊಮ್ಮೆ ಅಪರಾಧ ಕೃತ್ಯಗಳಲ್ಲಿ ಕೊನೆಗೊಳ್ಳುತ್ತಿರುವುದು ದುರಂತವೇ ಸರಿ.  ಇದೀಗ ಇಂತಹದ್ದೇ ಘಟನೆ ನಡೆದಿದ್ದು, ಮದುವೆ ಸಂಭ್ರಮದಲ್ಲಿದ್ದವರಿಗೆ ಮದುಮಗನೇ ಶಾಕ್​​ ನೀಡಿದ್ದಾನೆ.

    ಮದುವೆ ಸಂಭ್ರಮಾಚರಣೆಯಲ್ಲಿದ್ದ ವೇಳೆಯೇ ಮದುಮಗನಿಂದ ಅಪರಾಧ ಕೃತ್ಯ ನಡೆದುಹೋಗಿದೆ. ಸಂತೋಷಕ್ಕಾಗಿ ಹಾರಿಸಿದ ಗುಂಡು ಸೀದಾ ತನ್ನ ಸ್ನೇಹಿತ ಎದೆಗೆ ತಗುಲಿ ಆತ ಸಾವನ್ನಪ್ಪಿದ್ದಾನೆ.

    ಉತ್ತರ ಪ್ರದೇಶದ ಸೊನ್ಭದ್ರ ಜಿಲ್ಲೆಯಲ್ಲಿ ಬ್ರಹ್ಮಾ ನಗರದಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು, ಮದುಮಗ ಮನೀಶ್​ ಮಧೇಶಿಯಾ ಸುತ್ತಲೂ ಸ್ನೇಹಿತರು ಸೇರಿದಂತೆ ಹಲವರು ನಿಂತಿದ್ದರು, ಇದೇ ವೇಳೆ ಖುಷಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ಗುಂಡು ಅಲ್ಲೇ ನಿಂತಿದ್ದ ತನ್ನ ಸೈನಿಕ ಸ್ನೇಹಿತ ಬಾಬು ಲಾಲ್​ ಯಾದವ್​ನನ್ನು ತಗುಲಿದೆ. ದುರಂತ ಎಂದರೆ ಈ ಗನ್​ ಕೂಡ ಮೃತ ಯಾದವ್​​ನದ್ದಾಗಿದೆ.

    ಕೂಡಲೇ ಯಾದವ್​ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಿಲ್ಲ. ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸ್​ ಅಧಿಕಾರಿ ಅಮರೇಂದ್ರ ಪ್ರತಾಪ್​ ಸಿಂಗ್​ ತಿಳಿಸಿದ್ದಾರೆ. ಇನ್ನು ವರನ ವಿರುದ್ಧ ದೂರು ಕೂಡ ದಾಖಲಾಗಿದೆ.

    ಯಾವುದೇ ಸಭೆ ಸಮಾರಂಭಗಳಲ್ಲಿ ಈ ರೀತಿ ಬಂದೂಕು ಬಳಸುವುದು ಕ್ರಿಮಿನಲ್ ಅಪರಾಧವಾಗಿದ್ದು, ಒಂದು ವೇಳೆ ಬಳಸಿದರೂ ಅನುಮತಿ ಪಡೆದಿರಬೇಕಿದೆ. ಇದು ಗೊತ್ತಿದ್ದರೂ ಪದೇ ಪದೇ ಇಂತಹ ಅಚಾತುರ್ಯ ಘಟನೆಗಳು ನಡೆಯುತ್ತಲೇ ಇದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts