More

    ದೇಶ ಕಂಡ ಅಪ್ರತಿಮ ನಾಯಕ

    ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರ 70ನೇ ವರ್ಷದ ಜನ್ಮದಿನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾರ ನಗರದ ಬಿಜೆಪಿ ಕಚೇರಿಯಲ್ಲಿ ರಕ್ತದಾನ ಶಿಬಿರ ಜರುಗಿತು.

    ಶಾಸಕ ನೆಹರು ಓಲೇಕಾರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತವು ವಿಶ್ವಗುರುವಾಗುತ್ತಿದೆ. ಯುವ ಮೋರ್ಚಾ ಪಕ್ಷದ ಬೆನ್ನೆಲುಬಾಗಿದೆ. ನೀವೆಲ್ಲರೂ ದೇಶ ಕಂಡ ಅಪ್ರತಿಮ ನಾಯಕ ಮೋದಿಯವರ ಜನ್ಮದಿನದಂದು ರಕ್ತದಾನ ಶಿಬಿರ ಆಯೋಜಿಸಿರುವುದು ಶ್ಲಾಘನೀಯವಾಗಿದೆ ಎಂದರು.

    ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳಿಕಾಯಿ ಮಾತನಾಡಿ, ದಣಿವರಿಯದ ನಾಯಕನ ಜನ್ಮದಿನವನ್ನು ಕೇವಲ ಭಾಷಣಗಳಿಂದ ಆಚರಿಸದೇ ರಕ್ತದಾನ ಮಾಡುವ ಮೂಲಕ ಅರ್ಥಗರ್ಭಿತವಾಗಿ ಆಚರಿಸಬೇಕು. ಅದಕ್ಕೆ ಯುವ ಮೋರ್ಚಾದಿಂದ ರಾಜ್ಯಾದ್ಯಂತ 70 ಕಡೆಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದರು.

    ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ, ಶಶಿಧರ ಹೊಸಳ್ಳಿ, ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ಕಳಸೂರ, ನಗರ ಘಟಕದ ಅಧ್ಯಕ್ಷ ಗಿರೀಶ ತುಪ್ಪದ, ನಗರಸಭೆ ಸದಸ್ಯೆ ಚನ್ನಮ್ಮ ಬ್ಯಾಡಗಿ, ಜಗದೀಶ ಮಲಗೋಡ, ವಿವಿಧ ಘಟಕದ ಪದಾಧಿಕಾರಿಗಳಾದ ಪವನಕುಮಾರ ಮಲ್ಲಾಡದ, ಪ್ರಕಾಶ ಶೃಂಗೇರಿ, ಅಭಿಷೇಕ ಗುಡಗೂರ, ವೀರೇಶ ಹಿರೇಮಠ, ಮಂಜುನಾಥ ಮಡಿವಾಳರ, ದಯಾನಂದ ಜಾಧವ, ವಿವೇಕಾನಂದ ಇಂಗಳಗಿ, ಪ್ರಶಾಂತ ಕೋಡಿತ್ಕರ್, ಕಿರಣ ಅಂಗಡಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts