More

    ಅಪಘಾತದಲ್ಲಿ ಗಾಯಗೊಂಡಿದ್ದವ ಸಾವು


    ಮಂಡ್ಯ : ಅಪಘಾತದಲ್ಲಿ ಗಾಯಗೊಂಡಿದ್ದ ತಾಲೂಕಿನ ತಮ್ಮಡಹಳ್ಳಿ ಗ್ರಾಮದ ಈರಯ್ಯ(60) ಶುಕ್ರವಾರ ಮೃತಪಟ್ಟಿದ್ದಾರೆ.


    ಸೆ.12ರಂದು ತಾಲೂಕಿನ ಬಸವನ ಬೆಟ್ಟದಲ್ಲಿ ಗೂಡ್ಸ್ ಟೆಂಪೋ ಉರುಳಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟು, ಅನೇಕರು ಗಾಯಗೊಂಡಿದ್ದರು.

    ತಮ್ಮಡಹಳ್ಳಿ ಗ್ರಾಮಸ್ಥರು ಬಸವನ ಬೆಟ್ಟದಲ್ಲಿರುವ ಹೆಬ್ಬೆಟ್ಟದ ಬಸವೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮಕ್ಕೆ ತೆರಳಿ ಹಿಂದಿರುಗುವಾಗ ಅಪಘಾತ ಸಂಭವಿಸಿತ್ತು.

    ಅವಘಡದಲ್ಲಿ 9 ಜನರು ತೀವ್ರವಾಗಿ ಗಾಯಗೊಂಡು ಮಂಡ್ಯ, ಮೈಸೂರು, ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರ ಪೈಕಿ ಈರಯ್ಯ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts