ಬೆಂಗಳೂರು: ಜನಪ್ರಿಯ ಛಾಯಾಗ್ರಾಹಕ ಸತ್ಯ ಹೆಗಡೆ ಅವರು ತಮ್ಮ ಸತ್ಯ ಹೆಗಡೆ ಸ್ಟುಡಿಯೋಸ್ ಎಂಬ ಯೂಟ್ಯೂಬ್ ಚಾನಲ್ನ ಮೂಲಕ ಕೆಲವು ಸದಭಿರುಚಿಯ ಕಿರುಚಿತ್ರಗಳನ್ನು ಬಿಡುಗಡೆ ಮಾಡುತ್ತಲೇ ಬಂದಿದ್ದಾರೆ. ಈಗಾಗಲೇ ಕೆಲವು ಕಿರುಚಿತ್ರಗಳು ಬಿಡುಗಡೆಯಾಗಿದ್ದು, ಈಗ ‘ದಿ ಲಾಸ್ಟ್ ಕೇಸ್’ ಎಂಬ ಇನ್ನೊಂದು ಹೊಸ ಚಿತ್ರವನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ: ಸಾಮಾನ್ಯ ಮನುಷ್ಯನನ್ನು ಬಡಿದೆಬ್ಬಿಸಲಿರುವ ‘ಆಪರೇಷನ್ ಯು’ …
ಎಲ್ಲಾ ಸಾಕ್ಷಿಗಿಂತ ಮನಸಾಕ್ಷಿಯೇ ದೊಡ್ಡದು ಎಂಬ ವಿಷಯವನ್ನು ಸಾರುವ ಈ ಚಿತ್ರ ಕಿರುಚಿತ್ರವನ್ನು ಪ್ರದೀಪ್ ಕೃಷ್ಣಮೂರ್ತಿ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ರಮೇಶ್ ಪಂಡಿತ್, ಶಂಕರ್ ಅಶ್ವತ್ಥ್, ಪುನೀತ್ ಬಾಬು, ಪ್ರದೀಪ್ ಅಂಚೆ ಮುಂತಾದವರು ಈ ಕಿರುಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಾಸುದೇವ ಮೂರ್ತಿ ಕಥೆ ಬರೆದಿರುವ ‘ದಿ ಲಾಸ್ಟ್ ಕೇಸ್’ಗೆ ಗಿರೀಶ್ ಸಂಗೀತ ನೀಡಿದ್ದಾರೆ. ರಂಗನಾಥ್ ಛಾಯಾಗ್ರಹಣ ಹಾಗೂ ಉಜ್ವಲ್ ಸಂಕಲನ ಈ ಕಿರುಚಿತ್ರಕ್ಕಿದೆ.
‘ನನಗೆ ಈ ಕಿರುಚಿತ್ರದ ಕಥೆ ಬಹಳ ಮೆಚ್ಚುಗೆಯಾಯಿತು. ಅಪರಾಧಿಯೊಬ್ಬ ನಾನೇ ಕೊಲೆಗಾರ ಎಂದು ಹೇಳಿ ಪೊಲೀಸರ ಬಳಿ ಶರಣಾಗುವ ವಿಷಯ ಬಹಳ ಮನಸ್ಸಿಗೆ ಹತ್ತಿರವಾಯಿತು’ ಎನ್ನುತ್ತಾರೆ ಈ ಕಿರುಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಹಿರಿಯ ನಟ ರಮೇಶ್ ಪಂಡಿತ್.
‘ದಿ ಲಾಸ್ಟ್ ಕೇಸ್’ ಕಿರುಚಿತ್ರ ಬಹಳ ಚೆನ್ನಾಗಿ ಮೂಡಿಬಂದಿದೆ ಎನ್ನುವ ಸತ್ಯ ಹೆಗಡೆ, ಆದಷ್ಟು ಬೇಗ ಈ ತಂಡದಿಂದ ಹಿರಿತೆರೆಯಲ್ಲಿ ಚಿತ್ರ ಮೂಡಿಬರಲಿ ಎಂದು ಹಾರೈಸುತ್ತಾರೆ.
ಇದನ್ನೂ ಓದಿ: ಪ್ಲೀಸ್ ಈ ಒಂದು ಪಾತ್ರ ಕೊಡಿ: ಮಾಧ್ಯಮಗಳ ಮುಂದೆಯೇ ಮನವಿ ಮಾಡಿಕೊಂಡ ನಟಿ ವರಲಕ್ಷ್ಮೀ
ಇತ್ತೀಚೆಗೆ ಈ ಕಿರುಚಿತ್ರದ ವಿಶೇಷ ಪ್ರದರ್ಶನವಿದ್ದು, ಈ ಸಂದರ್ಭದಲ್ಲಿ ಹಿರಿಯ ನಿರ್ದೇಶಕ ಚಿಂದೋಡಿ ಬಂಗಾರೇಶ್, ಸಾಹಿತಿ ಕವಿರಾಜ್, ಸಂಭಾಷಣೆಕಾರ ಮಾಸ್ತಿ ಮಂಜುನಾಥ್ ಮುಂತಾದವರು ಹಾಜರಿದ್ದರು.
ಲೈಗರ್ ಸಿನಿಮಾ ಹೀನಾಯ ಸೋಲು: ಬಾಡಿಗೆ ಹೊರೆ ತಡೆಯಲಾರದೇ ಮುಂಬೈ ತೊರೆಯಲು ಪುರಿ ಜಗನ್ನಾಥ್ ನಿರ್ಧಾರ