More

    ನಿರುದ್ಯೋಗವೆಂಬ ದುರಂತ ಸೃಷ್ಟಿಸಿದ ಮೋದಿ-ಷಾ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರಿಗೆ ನನ್ನದೊಂದು ಸೆಲ್ಯೂಟ್: ರಾಹುಲ್ ಗಾಂಧಿ

    ನವದೆಹಲಿ: ಕೇಂದ್ರ ಸರ್ಕಾರದ್ದು ಕಾರ್ಮಿಕ ವಿರೋಧಿ ನೀತಿ ಎಂದು ಆರೋಪಿಸಿ ದೇಶಾದ್ಯಂತ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್​ಗೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಟ್ವೀಟ್​ ಮಾಡಿರುವ ರಾಹುಲ್​ ಗಾಂಧಿ, ನರೇಂದ್ರ ಮೋದಿ- ಅಮಿತ್​ ಷಾ ಸರ್ಕಾರರ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ನಿರುದ್ಯೋಗವೆಂಬ ದುರಂತ ಸಂಭವಿಸಿದೆ. ನರೇಂದ್ರ ಮೋದಿಯವರ ಕ್ರೋನಿ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ದೇಶದ ಸಾರ್ವಜನಿಕ ವಲಯದ ಸಂಸ್ಥೆಗಳನ್ನೇ ದುರ್ಬಲಗೊಳಿಸಲಾಗಿದೆ.

    ಇವತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ದ್ಯೋತಕವಾಗಿ ಭಾರತ್ ಬಂದ್​ ನಡೆಸುತ್ತಿರುವ 25 ಕೋಟಿ ಕಾರ್ಮಿಕರಿಗೆ ಒಂದು ಸೆಲ್ಯೂಟ್​ ಎಂದು ರಾಹುಲ್​ ಗಾಂಧಿ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

    ಕೇಂದ್ರ ಸರ್ಕಾರ ಕಾರ್ಮಿಕ ನೀತಿಗೆ ವಿರೋಧ ವ್ಯಕ್ತಪಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶಾದ್ಯಂತ ಸುಮಾರು 10 ಕಾರ್ಮಿಕ ಸಂಘಟನೆಗಳು ವಿವಿಧ ರಾಜ್ಯ ಕಾರ್ಮಿಕ ಒಕ್ಕೂಟಗಳೊಂದಿಗೆ ಸೇರಿ ಇಂದು ಭಾರತ್​ ಬಂದ್​ ನಡೆಸುತ್ತಿವೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts