ಗಾಜಿಯಾಬಾದ್: ಕೊನೆಯುಸಿರೆಳೆದಿದ್ದ ಸಂಬಂಧಿಯ ಅಂತ್ಯಸಂಸ್ಕಾರ ಮಾಡಲು ಬಂದಿದ್ದ ಸಂಬಂಧಿಕರು ದುರ್ಮರಣ ಹೊಂದಿರುವ ಘಟನೆ ದೆಹಲಿ ಸನಿಹದ ಗಾಜಿಯಾಬಾದ್ನಲ್ಲಿ ನಡೆದಿದೆ. ಈಗಾಗಲೇ 18 ಜನರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇದನ್ನೂ ಓದಿ: ತಂಗಿಗಾಗಿ ಅಕ್ಕನನ್ನೇ ನಗ್ನಗೊಳಿಸಿದ! ಸಹಾಯಕ್ಕೆ ಕೇಳಿ ಬರಲಿ ಎಂದು ಕಾದಿದ್ದವನಿಗೆ ಕಾದಿತ್ತು ದೊಡ್ಡ ಶಾಕ್!
ಗಾಜಿಯಾಬಾದ್ನ ಮುರಾದ್ನಗರದಲ್ಲಿ ಇಂತದ್ದೊಂದು ದುರ್ಘಟನೆ ನಡೆದಿದೆ. ಉಖಲಾರ್ಸಿ ಗ್ರಾಮದ ವ್ಯಕ್ತಿಯೊಬ್ಬ ಮೃತನಾಗಿದ್ದ. ಆತನ ಅಂತ್ಯಸಂಸ್ಕಾರ ನಡೆಸಲೆಂದು ಸಂಬಂಧಿಕರು ಭಾನುವಾರ ಬೆಳಗ್ಗೆ ಶವಾಗಾರಕ್ಕೆ ಬಂದಿದ್ದಾರೆ. ಅಂತ್ಯಕ್ರಿಯೆ ನಡೆಸುವ ವೇಳೆಯಲ್ಲಿ ಜೋರಾಗಿ ಮಳೆ ಸುರಿದಿದೆ. ಆ ಹಿನ್ನೆಲೆಯಲ್ಲಿ ಎಲ್ಲರೂ ಅಲ್ಲಿನ ಛಾವಣಿಯ ಒಳಗೆ ಸೇರಿಕೊಂಡಿದ್ದಾರೆ. ಈ ವೇಳೆ ಛಾವಣಿ ಕುಸಿದುಬಿದ್ದಿದೆ.
ಇದನ್ನೂ ಓದಿ: ಮನೆ ಮೇಲೆ ಉರುಳಿದ ಮದುವೆ ದಿಬ್ಬಣದ ಬಸ್, ಐವರು ಸ್ಥಳದಲ್ಲೇ ಸಾವು
ಛಾವಣಿಯ ಅಡಿ ಕನಿಷ್ಠ 24 ಮಂದಿ ಇದ್ದರು ಎನ್ನಲಾಗಿದೆ. ಸ್ಥಳಕ್ಕೆ ಗಾಜಿಯಾಬಾದ್ ಪೊಲೀಸರು ಮತ್ತು ಎನ್ಡಿಆರ್ಎಫ್ನ ರಕ್ಷಣಾ ತಂಡ ಬಂದಿದ್ದು, ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಈವರೆಗೆ 18 ಮಂದಿಯ ಮೃತ ದೇಹವನ್ನು ಹೊರತೆಗೆಯಲಾಗಿದೆ. ಛಾವಣಿಯ ಅವಶೇಷಗಳ ಅಡಿ ಇನ್ನಷ್ಟು ಜನರಿದ್ದು ಅವರನ್ನು ಹೊರತೆಗೆಯಲು ಹರಸಾಹಸ ಮಾಡಲಾಗುತ್ತಿದೆ. ಗಾಯಾಳಯಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಸಂತಾಪ ಸೂಚಿಸಿದ್ದಾರೆ. (ಏಜೆನ್ಸೀಸ್)
ಅಮ್ಮ ಸತ್ತಿಲ್ಲ, ಮಲಗಿದ್ದಾಳೆ! 20 ದಿನದಿಂದ ಶವವನ್ನೇ ಪೂಜಿಸುತ್ತಿರುವ ಮಕ್ಕಳು! ಕಣ್ಣೀರು ತರಿಸುತ್ತೆ ಈ ಮಕ್ಕಳ ನಂಬಿಕೆ
ಮಗನ ಹೆಂಡತಿಗೆ ಮಾವ ಹೀಗಾ ಮಾಡೋದು?! ತನಿಖೆಯಲ್ಲಿ ಬಯಲಾಯಿತು ಮಾವನ ನಿಜ ಬಣ್ಣ